Wednesday, September 9, 2026
Wednesday, September 9, 2026

ಹೊನ್ನಾಳಿ ಹಿರೇಕಲ್ಮಠದಲ್ಲಿ ಫೆ.27 ರಿಂದ ಮಾರ್ಚ್ 2 ವರೆಗೆ ಕೃಷಿಮೇಳ

Date:

ಹೊನ್ನಾಳಿ ಹಿರೇಕಲ್ಮಠದಲ್ಲಿ ರಾಜ್ಯಮಟ್ಟದ ಕೃಷಿ ಮೇಳವು ಇದೇ ತಿಂಗಳು 27 28 ಹಾಗೂ 1.2.ರಂದು ನಾಲ್ಕು ದಿನಗಳ ಕಾಲ ಕೃಷಿ ಮೇಳವು ನಡೆಯಲಿದೆ. ಲಿಂಗೈಕ್ಯ ಶ್ರೀ ಮೃತ್ಯುಂಜಯ ಶಿವಾಚಾರ್ಯ ಮಹಾಸ್ವಾಮೀಜಿಯವರ 56ನೇ ಪುಣ್ಯರಾಧನೆ ಹಾಗೂ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿಯವರ 11ನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ನಡೆಯಲಿದೆ.
ದತ್ತಿ ಉಪನ್ಯಾಸ ಹಾಗೂ ಸಾಮೂಹಿಕ ವಿವಾಹ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಈ ಕಾರ್ಯಕ್ರಮದ ಜೊತೆಗೆ ರಾಜ್ಯಮಟ್ಟದ ಕೃಷಿ ಮೇಳವು ನಡೆಯಲಿದ್ದು ರಾಜಕೀಯ ಮುಖಂಡರು ಹಾಗೂ ಚಲನಚಿತ್ರದ ಕಲಾವಿದರು. ಹಾಗೂ ರಾಜ್ಯದ ಪ್ರಗತಿಪರ ರೈತರಿಗೆ ಅಭಿನಂದಿಸಲಾಗುವುದು. ರೈತರಿಗಾಗಿ ಕೃಷಿಘೋಷ್ಠಿ ಕೃಷಿ ಉಪಕರಣಗಳ ಮಳಿಗೆ ಹಾಗೂ ಪ್ರಸಾದ ವ್ಯವಸ್ಥೆ ಹಾಗೂ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದಂತಹ ಗಣ್ಯ ಮಾನ್ಯರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.
ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಶಾಸಕ ಡಿಜಿ ಶಾಂತನಗೌಡ್ರು ಹಾಗೂ ಹೆಚ್ ಪಿ ಮಂಜಪ್ಪ ಹಾಗೂ ಮಾಜಿ ಸಚಿವ ರೇಣುಕಾಚಾರ್ಯ ಅವರ ಮುಖಂಡತ್ವದಲ್ಲಿ ಹಾಗೂ ಪರಮಪೂಜ್ಯ ಶ್ರೀ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಜಿಯವರ ಮಾರ್ಗ ದರ್ಶನದಲ್ಲಿ ನಡೆಯುವುದು.

ಶಿವಮೊಗ್ಗದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀಗಳು ಈ ಕುರಿತು ವಿವರ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿ ಕುಬೇಂದ್ರಪ್ಪ. ಧನರಾಜ್ ವಿಜಯಕುಮಾರ್, ಹೆಚ್ ಎ ರಂಜಿತ್, ಕತ್ತಿಗೆ ನಾಗರಾಜ್, ರಘು, ಹೊಸಕೆರೆ ಸುರೇಶ್, ರುದ್ರೇಶ್ ಶಿವು ಹಾಲಸ್ವಾಮಿ. ಬಿ ಸುರೇಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...