Thursday, February 19, 2026
Thursday, February 19, 2026

ರೈತರೆ ಗಮನಿಸಿ! ಪರವಾನಗಿ ಇಲ್ಲದ ಪೀಡೆನಾಶಕ ವಿರುದ್ಧ ಕೃಷಿ ಇಲಾಖೆ ಕಠಿಣ ಕ್ರಮ

Date:

ದಿನಾಂಕ 17-02-2026 ರಂದು ಶ್ರೀಯುತ ರಾಮಕೃಷ್ಣ, ಮಾನ್ಯ ಜಂಟಿ ಕೃಷಿ ನಿರ್ದೇಶಕರು(ಜಾಗ್ರತ ಕೋಶ)
ಮೈಸೂರು, ರವರ ಮಾರ್ಗದರ್ಶನದಲ್ಲಿ ಶಿವಮೊಗ್ಗ ನಗರದ ಮೂರ್ತಿ ಪ್ಯಾರಡೈಸ್ 60 ಅಡಿ ರಸ್ತೆ ವಿನೋಬನಗರದಲ್ಲಿರುವ
ಅಲ್ಟಿಮ ಸರ್ಚ್ ರವರ ಮಳಿಗೆಯಲ್ಲಿ ಪೀಡೆನಾಶಕಗಳ ಪರಿಶೀಲನೆ ನಡೆಸಲಾಯಿತು. ಮಳಿಗೆಯಲ್ಲಿ ರಾಟಾಲ್ ಎಂಬ 1008 ಕೆ
ಜಿ ಅಲ್ಟಿಮ ಸರ್ಚ್ ವಾಪಿ ಗುಜರಾತ್ ಕಂಪನಿಯ ಸುಮಾರು ರೂ.17,28,000/-(ಹದಿನೇಳು ಲಕ್ಷದ ಇಪ್ಪತ್ತೆಂಟು ಸಾವಿರ)
ಪೀಡೆನಾಶಕವನ್ನು ದಾಸ್ತಾನು ಮಾಡಿದ್ದು, ಸದರಿ ಪೀಡೆನಾಶಕವು ಸಿ ಐ ಆರ್ ಸಂಖ್ಯೆ ಹಾಗೂ ತಯಾರಿಕ ಪರವಾನಿಗೆ ಸಂಖ್ಯೆ
ನಮೂದಿಸದೆ ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವು ಕಂಡು ಬಂದಿದ್ದು ಕೀಟನಾಶಕ ಅಧಿನಿಯಮ 1968 ಹಾಗೂ ಕೀಟನಾಶಕ
ಕಾಯಿದೆ 1971 ಉಲ್ಲಂಘನೆಯಾಗಿರುತ್ತದೆ. ಈ ಸಂಭಂದ ಸದರಿ ದಾಸ್ತಾನನ್ನು ಪಂಚರ ಸಮಕ್ಷಮ ಮಹಜರ್ ಜರುಗಿಸಿ ಜಪ್ತಿ
ಮಾಡಿ ಕಾನೂನು ಕ್ರಮ ಕೈಗೊಳ್ಳಲಾಯಿತು. ಈ ಸಂಧರ್ಭದಲ್ಲಿ ಜಾಗೃತ ಕೋಶ ಮೈಸೂರಿನ ಸಹಾಯಕ ಕೃಷಿ
ನಿರ್ದೇಶಕರುಗಳಾದ ಶ್ರೀ ಜಗದೀಶ್ ಮತ್ತು ಶ್ರೀ ಯಾದವ ಬಾಬು, ಶ್ರೀ ಬಿಸಿ ಶಶಿಧರ ಸಹಾಯಕ ಕೃಷಿ ನಿರ್ದೇಶಕರು (ಜಾಗೃತ
ಕೋಶ ಶಿವಮೊಗ್ಗ), ಶ್ರೀ ಮತಿ ಗಿರಿಜಾ ಪಟ್ಟಣ ಶೆಟ್ಟಿ, ಸಹಾಯಕ ಕೃಷಿ ನಿರ್ದೇಶಕರು, ಶ್ರೀ ಚೇತನ್ ಸಿ ಜಿ ತಾಂತ್ರಿಕ ಅಧಿಕಾರಿ
ಹಾಗೂ ಶ್ರೀ ಸುನಿಲ್ ಕೃಷಿ ಅಧಿಕಾರಿ ಕೃಷಿ ಇಲಾಖೆ ಶಿವಮೊಗ್ಗ ರವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Badminton Association ಅಖಿಲ ಭಾರತ ಬ್ಯಾಡ್ಮಿಂಟನ್ ಪಂದ್ಯಾವಳಿ. ಶಿವಮೊಗ್ಗದ ಪವನ್ – ಪುನೀತ್ ಚಾಂಪಿಯನ್ಸ್

Karnataka Badminton Association ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ ಬೆಂಗಳೂರಿನ ವಸಂತ ನಗರದಲ್ಲಿ...

Department of Kannada and Culture ಫೆ.20. ಕವಿ ಸರ್ವಜ್ಞ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ...

Water Supply and Drainage Board ನಿರುದ್ಯೋಗಿಗಳಿಗೆ ಸಿಹಿಸುದ್ದಿ!. ...

Water Supply and Drainage Board ಶಿವಮೊಗ್ಗ ನಗರ ನೀರು ಸರಬರಾಜು...