Friday, February 20, 2026
Friday, February 20, 2026

Chamber of Commerce Shivamogga ಶಿವಮೊಗ್ಗ ನಗರವನ್ನು ಮಾಹಿತಿ ತಂತ್ರಜ್ಞಾನ, ವಾಣಿಜ್ಯದ ” ಹಬ್” ಆಗಿ ಪರಿವರ್ತಿಸಬೇಕು- ಬಿ.ಗೋಪಿನಾಥ್

Date:

Chamber of Commerce Shivamogga ಮಾಹಿತಿ ತಂತ್ರಜ್ಞಾನ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಶಿವಮೊಗ್ಗದಲ್ಲಿ ಹೆಚ್ಚಿನ ಅವಕಾಶಗಳಿವೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಬೆಂಗಳೂರಿನಾಚೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಶಿವಮೊಗ್ಗ ನಗರವನ್ನು ಮಾಹಿತಿ ತಂತ್ರಜ್ಞಾನದ ವಾಣಿಜ್ಯದ ಕೇಂದ್ರವಾಗಿ ಪರಿವರ್ತಿಸುವುದು, ಬೆಂಗಳೂರಿನ ಮೇಲಿನ ಹೊರೆ ಕಡಿಮೆ ಮಾಡುವುದು ಮಾಹಿತಿ ತಂತ್ರಜ್ಞಾನ ಮತ್ತು ನಾವೀನ್ಯತೆ ಸಂಬಂಧಿತ ಚಟುವಟಿಕೆಯನ್ನು ಶಿವಮೊಗ್ಗ ನಗರಕ್ಕೆ ಸ್ಥಳಾಂತರಿಸುವಂತೆ ಸರ್ಕಾರದ ಗಮನ ಸೆಳೆಯುವುದು ಬೆಂಗಳೂರಿನಾಚೆ ಕಾರ್ಯಕ್ರಮದ ಗುರಿಯಾಗಿದೆ ಎಂದು ತಿಳಿಸಿದರು.

ಫೆಬ್ರವರಿ 28ಕ್ಕೆ ಶಿವಮೊಗ್ಗದ ಜೆಎನ್‌ಎನ್‌ಸಿಇ ಸಭಾಂಗಣದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ (ಎಫ್‌ಕೆಸಿಸಿಐ) ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ ) ಸಹಯೋಗದೊಂದಿಗೆ ಬೆಂಗಳೂರಿನಾಚೆ ಮಾಹಿತಿ ತಂತ್ರಜ್ಞಾನ ಕಾರ್ಯಕ್ರಮ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಮಾಹಿತಿ ತಂತ್ರಜ್ಞಾನ ಪ್ರತಿಭಾವಂತರ ಸಂಖ್ಯೆ ಸಾಕಷ್ಟಿದ್ದು, ಬೌದ್ಧಿಕ ಬಂಡವಾಳ, ಅಭಿವೃದ್ಧಿ ಹೊಂದುತ್ತಿರುವ ಐಟಿ ಪರಿಸರ ವ್ಯವಸ್ಥೆ, ಐಟಿ ಎಸ್‌ಇಝಡ್ ಮತ್ತು ಟೆಕ್ ಪಾರ್ಕ್, ಎಂಜಿನಿಯರಿಂಗ್ ತಂತ್ರಜ್ಞಾನ ಕಾಲೇಜು, ಇನ್‌ಕುಬೇಟರ್, ಐಟಿ, ಸ್ಟಾರ್ಟ್ಅಪ್ ಹೊಂದಿರುವ ನಗರ. ಮಲೆನಾಡು ಪ್ರದೇಶ ಶಿವಮೊಗ್ಗ ಮಾಹಿತಿ ತಂತ್ರಜ್ಞಾನದ ಸಂಭಾವ್ಯ ಕೇಂದ್ರವಾಗಿ ಬೆಳೆಯಲು ವಿಪುಲ ಅವಕಾಶವಿದೆ ಎಂದು ತಿಳಿಸಿದರು.

ಅನ್ವೇಷಣ ನಾವೀನ್ಯತೆ ಮತ್ತು ಉದ್ಯಮಶೀಲತಾ ವೇದಿಕೆಯ ಸಿ.ಎಂ.ಪಾಟೀಲ್ ಮಾತನಾಡಿ, ಮಲೆನಾಡು ಪ್ರದೇಶದ ಮೇಲೆ ಆರಂಭಿಕ ಗಮನವನ್ನು ಹೊಂದಿರುವ ಉದ್ಯಮಶೀಲ ಪರಿಸರ ವ್ಯವಸ್ಥೆಯ ಬೆಳವಣಿಗೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು.

Chamber of Commerce Shivamogga ಅನ್ವೇಷಣ ನಾವೀನ್ಯತೆ ಮತ್ತು ಉದ್ಯಮಶೀಲತಾ ವೇದಿಕೆಯ ಹರೀಶ್, ಭರತ್, ಜೆಎನ್‌ಎನ್‌ಸಿಇ ಕಾಲೇಜಿನ ಅರುಣ್‌ ಕುಮಾರ್‌, ನಾಗೇಶ್, ಮಾಹಿತಿ ತಂತ್ರಜ್ಞಾನದ ಪ್ರಮುಖರಾದ ಸುರೇಶ್ ಕುಮಾರ್, ಶಿವಕುಮಾರ್, ನವೀನ್, ವೆಂಕಟೇಶ್, ವಿಶ್ವಾಸ್, ವಿಶಾಲ್ ಗೌಡ, ಮಾಚೇನಹಳ್ಳಿ ಕೈಗಾರಿಕಾ ಸಂಘದ ಡಿ.ಜಿ.ಬೆನಕಪ್ಪ, ಡಿವಿಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲೆ ಪೂರ್ಣಿಮ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ವಿನೋದ್‌ಕುಮಾರ್, ಜಿ.ವಿ.ಕಿರಣ್ ಕುಮಾರ್, ಸಿ.ಎ.ಶರತ್, ರವಿಪ್ರಕಾಶ್ ಜೆನ್ನಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivaganga Yoga Center ಭಜನೆಯಿಂದ ಭಕ್ತಿಭಾವ ಸಿಂಚನ.ಧ್ವನಿ ಸಂಸ್ಕರಣ ಪ್ರಕ್ರಿಯೆ- ಹೆಚ್.ಎಂ.ಚಂದ್ರಶೇಖರಯ್ಯ

Shivaganga Yoga Center ಶಿವಗಂಗಾ ಯೋಗ ಕೇಂದ್ರ ಕಲ್ಲಹಳ್ಳಿಯಲ್ಲಿ ಮಹಾಶಿವರಾತ್ರಿಯ ಅಂಗವಾಗಿ...

Kuvempu University ಪಠ್ಯಕ್ರಮದ ಜೊತೆಗೆ ಇತರೆ ಶೈಕ್ಷಣಿಕ ಚಟುವಟಿಕೆಗಳು ಮಹತ್ವ ಪಾತ್ರವಹಿಸುತ್ತವೆ- ಪ್ರೊ.ತಿಮ್ಮರಾಯಪ್ಪ

ಪಾಥ್ವೇಸ್ ಘಟಕದ ವತಿಯಿಂದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ರಸಪ್ರಶ್ನಾ ಕಾರ್ಯಕ್ರಮ ವನ್ನು...

Karnataka Lokayukta Police ಸಾಗರದಲ್ಲಿ ಲೋಕಾಯುಕ್ತ ಪೊಲೀಸ್ ಜಿಲ್ಲಾ ಅಧಿಕಾರಿಗಳಿಂದ ಜನರ ಅಹವಾಲು ಸ್ವೀಕಾರ

Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು...