Friday, February 20, 2026
Friday, February 20, 2026

ರೈತರು ಮತ್ತು ಜನಸಾಮಾನ್ಯರಿಗೆ ಭೂವಿವಾದಗಳಿಗೆ ಸಂಬಂಧಿಸಿದ ಕಾನೂನು ಅರಿವು, ಪರಿಹಾರ ತಿಳಿಸಬೇಕು- ನ್ಯಾ.ಎಂ.ಎಸ್.ಸಂತೋಷ್

Date:

ಜನಸಾಮಾನ್ಯರಿಗೆ ಕಾನೂನಿನ ಅರಿವು ಅತ್ಯಂತ ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಹೇಳಿದರು.
ಹೊಸಕೊಪ್ಪ-ತಟ್ಟೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕುವೆಂಪು ವಿಶ್ವವಿದ್ಯಾಲಯ, ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಜೆ ಕಾಲೇಜಿನ ರಾಷ್ಟ್ರೀಯಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರದಲ್ಲಿ ಮಾತನಾಡಿದರು.
ರೈತರು ಮತ್ತು ಜನಸಾಮಾನ್ಯರಿಗೆ ಸಂಬಂಧಿಸಿದ ಭೂ ವಿವಾದಗಳು ಮತ್ತು ಅವುಗಳಿಗೆ ಪರಿಹಾರಗಳನ್ನು ಅರಿತುಕೊಳ್ಳಬೇಕು. ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ಹೊಂದಬೇಕು. ತೊಂದರೆಗೆ ಒಳಗಾದ ಸಂದರ್ಭದಲ್ಲಿ ಯಾವ ರೀತಿ ಮುನ್ಸೂಚನೆ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.
ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಜಿ.ಮಧುಸೂದನ್ ಮಾತನಾಡಿ, ಎನ್‌ಎಸ್‌ಎಸ್ ಶಿಬಿರಗಳು ವಿವಿಧ ಕಾರ್ಯಕ್ರಮಗಳ ಮೂಲಕ ಗ್ರಾಮಗಳಲ್ಲಿ ಅರಿವನ್ನು ಮೂಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ಪಿ.ದಿನೇಶ್ ಮಾತನಾಡಿ, ಎನ್‌ಎಸ್‌ಎಸ್
ಶಿಬಿರಗಳಿಂದ ಗ್ರಾಮಗಳಲ್ಲಿ ಸ್ವಚ್ಛತೆ ಅರಿವು ಮೂಡಿಸಬಹುದು ಮತ್ತು ವಿವಿಧ ಕಾರ್ಯಕ್ರಮಗಳ ಯೋಜನೆ ಮೂಲಕ ಜನರಲ್ಲಿ ವಿವಿಧ ಬಗೆಯ ವಿಷಯಗಳ ಜ್ಞಾನದ ಅರಿವನ್ನು ಮೂಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯವಶ್ಯಕವಾಗಿದ್ದು, ಕಾನೂನಿನ ಅಡಿಯಲ್ಲಿ ಪಡೆಯಬಹುದಾದ ಹಲವಾರು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸದೃಢ ಭಾರತವನ್ನು ನಾವು ಕಟ್ಟಬೇಕಾದರೆ ಯುವಪೀಳಿಗೆಯ ಪಾತ್ರ ಮುಖ್ಯವಾಗಿದೆ. ಈ ರೀತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ಅವರಿಗೆ ಅರಿವನ್ನು ಮೂಡಿಸುವುದು ಅತ್ಯಂತ ಉಪಯುಕ್ತಕಾರಿಯಾದ ಅಂಶವಾಗಿದೆ ಎಂದು ತಿಳಿಸಿದರು.
ರಾಷ್ಟಿçÃಯ ಸೇವಾ ಯೋಜನೆ ಅಧಿಕಾರಿ ಜಿ.ಕೆ.ಮಂಜಪ್ಪ, ಡಿವಿಎಸ್ ಸಂಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಎನ್.ಕುಮಾರಸ್ವಾಮಿ, ಸುಮಾ, ಸಹ ಶಿಬಿರಾಧಿಕಾರಿ ಮನು ಎಸ್ ಮೂರ್ತಿ ಮತ್ತು ಸಹಾಯಕ ಎನ್.ಮಂಜುನಾಥ್, ಸಿಬ್ಬಂದಿ, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivaganga Yoga Center ಭಜನೆಯಿಂದ ಭಕ್ತಿಭಾವ ಸಿಂಚನ.ಧ್ವನಿ ಸಂಸ್ಕರಣ ಪ್ರಕ್ರಿಯೆ- ಹೆಚ್.ಎಂ.ಚಂದ್ರಶೇಖರಯ್ಯ

Shivaganga Yoga Center ಶಿವಗಂಗಾ ಯೋಗ ಕೇಂದ್ರ ಕಲ್ಲಹಳ್ಳಿಯಲ್ಲಿ ಮಹಾಶಿವರಾತ್ರಿಯ ಅಂಗವಾಗಿ...

Kuvempu University ಪಠ್ಯಕ್ರಮದ ಜೊತೆಗೆ ಇತರೆ ಶೈಕ್ಷಣಿಕ ಚಟುವಟಿಕೆಗಳು ಮಹತ್ವ ಪಾತ್ರವಹಿಸುತ್ತವೆ- ಪ್ರೊ.ತಿಮ್ಮರಾಯಪ್ಪ

ಪಾಥ್ವೇಸ್ ಘಟಕದ ವತಿಯಿಂದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ರಸಪ್ರಶ್ನಾ ಕಾರ್ಯಕ್ರಮ ವನ್ನು...

Chamber of Commerce Shivamogga ಶಿವಮೊಗ್ಗ ನಗರವನ್ನು ಮಾಹಿತಿ ತಂತ್ರಜ್ಞಾನ, ವಾಣಿಜ್ಯದ ” ಹಬ್” ಆಗಿ ಪರಿವರ್ತಿಸಬೇಕು- ಬಿ.ಗೋಪಿನಾಥ್

Chamber of Commerce Shivamogga ಮಾಹಿತಿ ತಂತ್ರಜ್ಞಾನ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಶಿವಮೊಗ್ಗದಲ್ಲಿ...