S.N.Channabasappa ನಮ್ಮ ಶಿವಮೊಗ್ಗ ನಗರದ ಅಧಿದೇವತೆ, ಶ್ರೀ ಕೋಟೆ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಅತ್ಯಂತ ಸನಿಹದಲ್ಲಿದ್ದು, ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಈ ವೈಭವದ ಜಾತ್ರೆಯನ್ನು ಅಚ್ಚುಕಟ್ಟಾಗಿ ಮತ್ತು ಯಶಸ್ವಿಯಾಗಿ ನಡೆಸೋಣ ಎಂದು ಶಾಸಕ ಎಸ್.ಎನ್ ಚನ್ನಬಸಪ್ಪ ಕರೆನೀಡಿದರು.
ಜಾತ್ರೆ ನಡೆಸುವ ನಿಟ್ಟಿನಲ್ಲಿ ಇಂದು ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಸಿದ್ಧತಾ ಸಭೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್ .ಎನ್. ಚನ್ನಬಸಪ್ಪ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ, ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತಾದಿಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ನೂತನ ಬೋರ್ವೆಲ್ ಅನ್ನು ಉದ್ಘಾಟಿಸಿದರು.
ಭಕ್ತರಿಗೆ ಯಾವುದೇ ರೀತಿಯ ಮೂಲಸೌಕರ್ಯದ ಕೊರತೆಯಾಗದಂತೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯೊಂದಿಗೆ ಶಾಸಕ ಚೆನ್ನಿ ಸೂಚಿಸಿದರು.
S.N.Channabasappa ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿಯಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್, ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಶ್ರೀ ಎಸ್.ಕೆ. ಮರಿಯಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎನ್. ಮಂಜುನಾಥ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀ ಪ್ರಭಾಕರ್ ಪಿ, ಪ್ರಮುಖರಾದ ಶ್ರೀ ಜ್ಞಾನೇಶ್ವರ್ ಸೇರಿದಂತೆ ಸಮಿತಿಯ ಗೌರವಾನ್ವಿತ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
