Bhadravati VISL ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ (ಶಿವಮೊಗ್ಗ), ಶಂಕರ ಕಣ್ಣಿನ ಆಸ್ಪತ್ರೆ (ಶಿವಮೊಗ್ಗ), ವಿಐಎಸ್ಎಲ್ ಆಸ್ಪತ್ರೆ, ಭದ್ರಾವತಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ, ಮತ್ತು ಇಸ್ಪಾತ್ ಮಹಿಳಾ ಸಮಾಜದ ಸಹಯೋಗದೊಂದಿಗೆ ಭದ್ರಾವತಿಯ ಅರಬಿಳಚಿ ಕ್ಯಾಂಪ್ ಗ್ರಾಮದಲ್ಲಿ ಸಮಗ್ರ ಉಚಿತ ವೈಧ್ಯಕೀಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತ್ತು.
ಹೃದಯಶಾಸ್ತ್ರ ಮೂಳೆ ಚಿಕಿತ್ಸೆ, ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತ್ರ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು.
ಇದರ ಅಂಗವಾಗಿ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆ, ಎಲೆಕ್ಟ್ರೋಕಾರ್ಡಿಯೋಗ್ರಾಮ್ (ಇಸಿಜಿ) ಮತ್ತು ಸ್ತ್ರೀ ಸಂಬಂಧಿತ ರೋಗಗಳ ತಪಾಸಣೆಗಳನ್ನು ಮಾಡಲಾಯಿತು.
ಇಸ್ಪಾತ್ ಮಹಿಳಾ ಸಮಾಜದ ಅಧ್ಯಕ್ಷರಾದ ಶ್ರೀಮತಿ ನಿಶಾ ಅನೂಪ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
Bhadravati VISL ಇವರೊಂದಿಗೆ ವಿಐಎಸ್ಎಲ್ನ ಪ್ರಭಾರಿ ಕಾರ್ಯಪಾಲಕ ನಿರ್ದೆಶಕರಾದ ಶ್ರೀ ಬಿ. ವಿಶ್ವನಾಥ, ಶ್ರೀ ಟಿ. ರವಿಚಂದ್ರನ್, ಪ್ರಭಾರಿ ಮಹಾ ಪ್ರಬಂಧಕರು (ಸ್ಥಾವರ), ಡಾ. ಕೆ.ಎಸ್. ಸುಜೀತ್ ಕುಮಾರ್, ಡಾ. ಟಿ.ಎನ್. ಸುಷ್ಮಾ, ಡಾ. ಎಸ್.ಎನ್. ಸುರೇಶ್, ಇಸ್ಪಾತ್ ಮಹಿಳಾ ಸಮಾಜದ ಉಪಾಧ್ಯಕ್ಷರಾದ ಶ್ರೀಮತಿ ಪಂಕಜ ವಿಶ್ವನಾಥ್, ಶ್ರೀಮತಿ ಸುಗಂಧೀ ರವಿಚಂದ್ರನ್, ಕಾರ್ಯದರ್ಶಿಯಾದ ಶ್ರೀಮತಿ ಈಶ್ವರೀ ನಾಥನ್, ಜಂಟಿ ಕಾರ್ಯದರ್ಶಿಯಾದ ಶ್ರೀಮತಿ ಶ್ರವಂತಿ ರೆಡ್ಡಿ, ಶ್ರೀ ಎಮ್.ಎಲ್. ಯೋಗೀಶ್, ಅರಬಿಳಚಿ ಗ್ರಾಮದಿಂದ ಶ್ರೀ ಶಿವುಮೇಸ್ತ್ರಿ, ಶ್ರೀ ಮುರುಗೇಶ, ಶ್ರೀ ರಾಮಲಿಂಗಮ್, ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಡಾ. ಪ್ರಶಾಂತಿ, ಡಾ.ಸಹನ ಪೂಜಾರಿ, ಕು. ತಹೀನಾ, ಕು. ಶಿನ್ಸಿ ಮತ್ತು ಶ್ರೀ ಗಣೇಶ್. ಶಂಕರ ಕಣ್ಣಿನ ಆಸ್ಪತ್ರೆಯ ಡಾ|| ಲಕ್ಷಿತ, ಶ್ರೀ ಪ್ರದೀಪ್ ಮತ್ತು ತಂಡದವರು ಉಪಸ್ಥಿತರಿದ್ದರು. 196 ಗ್ರಾಮಸ್ಥರು ಈ ಶಿಬಿರದ ಸದುಪಯೋಗಪಡಿಸಿಕೊಂಡರು.
ವಿಐಎಸ್ಎಲ್ವತಿಯಿಂದ ಉಚಿತ ಔಷಧಿಗಳನ್ನು ವಿತರಿಸಲಾಯಿತು.
