ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಮನೆಯೊಂದರಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಸುಮಾರು 2 ದಿನಗಳ ಹಿಂದೆಯೇ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.
ಅರಣ್ಯ ಇಲಾಖೆಯ ಹಂಗಾಮಿ ನೌಕರನಾಗಿ ಕೆಲಸ ಮಾಡುತಿದ್ದ ರಾಘವೇಂದ್ರ
ಮದ್ಯಪಾನ ಮಾಡಿ ಮಲಗಿದ್ದರು ಎನ್ನಲಾಗುತ್ತಿದೆ.
ಮೃತರ ಪಾರ್ಥವ ಶರೀರವನ್ನು ತೀರ್ಥಹಳ್ಳಿಯ ಜೆ ಸಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಆಗುಂಬೆ ಪೊಲೀಸ್ ಪಿ ಎಸ್ ಐ ಶಿವನ ಗೌಡ ಪಾಟೀಲ್ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ.
