Monday, April 13, 2026
Monday, April 13, 2026

Gramabharati Trust ಮಾತೃಭೂಮಿಯನ್ನ ದೇವತೆಯಂತೆ ಆರಾಧಿಸುವ ಅರ್ಥ “ವಂದೇ ಮಾತರಂ” ಗೀತೆಯಲ್ಲಿದೆ- ನ.ನಾಗರಾಜ

Date:

Gramabharati Trust ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ವಿರುದ್ಧ ಪ್ರತಿರೋಧ ಮತ್ತು ಏಕತೆಯ ಪ್ರಬಲ ಲಾಂಛನವಾಗಿದ್ದೇ ವಂದೇ ಮಾತರಂ ಗೀತೆ. ಮಾತೃಭೂಮಿಯನ್ನು ದೇವತೆಯಂತೆ ಆರಾಧಿಸುವ ಅರ್ಥ ಈ ಗೀತೆಗೆ ಇದೆ ಎಂದು ವಿಕ್ರಮ ವಾರಪತ್ರಿಕೆಯ ಗೌರವ ಸಂಪಾದಕ ನ. ನಾಗರಾಜ ಹೇಳಿದರು.

ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಗ್ರಾಮಭಾರತಿ ಟ್ರಸ್ಟ್, ರಾಷ್ಟ್ರೊತ್ಥಾನ ಬಳಗ ಮತ್ತು ಗ್ರಾಮಭಾರತಿ ಟ್ರಸ್ಟ್ ಆಶ್ರಯದಲ್ಲಿ ನಡೆದ ಸಾಹಿತ್ಯ ಸಂಸ್ಕೃತಿ ಉತ್ಸವದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಗಾಯಕ ಗರ್ತಿಕೆರೆ ರಾಘಣ್ಣ ಸಾಹಿತ್ಯ ಸರ್ವರ ಹಿತ ಬಯಸುತ್ತದೆ. ಸಾಹಿತ್ಯವೂ ಮನಸ್ಸಿಗೆ ಮುದನೀಡುವ ಒಂದು ಅಮೂಲ್ಯ ಸಾಧನ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹನಿಯ ರವಿ ಮಾತನಾಡಿ ಈಗಿನ ಕೇಂದ್ರ ಸರ್ಕಾರ ವಂದೇ ಮಾತರಂ ಗೀತೆಯನ್ನು ಕಡ್ಡಾಯಗೊಳಿಸಿ ಆದೇಶವನ್ನ ಹೊರತಂದಿರುವುದು ಮಹತ್ವದ ಸಂಗತಿ ಮತ್ತು ಕಡ್ಡಾಯವಾಗಿ ಪ್ರತಿಯೊಬ್ಬರೂ ಸಂಪೂರ್ಣ ವಂದೇ ಮಾತರಂ ಗೀತೆಯನ್ನು ಕಲಿಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಳಗ್ಗೆಯಿಂದ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ, 20 ಕ್ಕೂ ಹೆಚ್ಚು ತಂಡಗಳಿಂದ ಭಜನಾ ಸಂಗಮ, ನಂತರ ಏಕಕಾಲದಲ್ಲಿ ನೂರಾರು ಕಂಠಗಳಿಂದ ವಂದೇ ಮಾತರಂ ಗೀತ ಗಾಯನ, ಹೊಸನಗರದ ವಿನಾಯಕ ಅವರಿಂದ ವಂದೇ ಮಾತರಂ ಚಿತ್ರ ಪ್ರದರ್ಶಿನಿ ನಡೆಯಿತು. ರಾತ್ರಿ ಕಾರಣಗಿರಿ ಕಲಾಭಾರತಿ ನೃತ್ಯ ಶಾಲೆ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಹಿರಿಯ ಯಕ್ಷಗಾನ ಕಲಾವಿದ ನಿತ್ಯಾನಂದ ಹೆಬ್ಬಾರ್, ಲೇಖಕ ತಿರುಪತಿ ನಾಯಕ್ ಇವರನ್ನು ಸನ್ಮಾನಿಸಲಾಯಿತು.

Gramabharati Trust ರಾಷ್ಟ್ರೋತ್ಥಾನ ಬಳಗದ ಅಧ್ಯಕ್ಷ ನಳಿನಚಂದ್ರ, ಆರತಿ ಮಹೇಶ್, ಹನಿಯ ಗುರುಮೂರ್ತಿ ಉಪಸ್ಥಿತರಿದ್ದರು. ಶ್ರೀಮತಿ ಶೃತಿ ನಿರೂಪಿಸಿ ವಿನಾಯಕ ಪ್ರಭು ಸ್ವಾಗತಿಸಿ, ಧನ್ಯ ರಮೇಶ್ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...