Sunday, June 7, 2026
Sunday, June 7, 2026

Department of Tourism ಮೊಬೈಲ್ ಕ್ಯಾಂಟೀನ್ ಆರಂಭಿಸಲು ಪ.ಜಾ/ ಪ.ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Date:

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿಗೆ ಸೇರಿದ 06 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 04 ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 20 ರಿಂದ 55 ವರ್ಷದೊಳಗಿನವರಾಗಿದ್ದು, 10ನೇ ತರಗತಿ ಉತ್ತೀರ್ಣ ಪ್ರಮಾಣ ಪತ್ರ, ಆಧಾರ್ ಪ್ರತಿ, ಲಘು ವಾಹನ ಚಾಲನಾ ಪರವಾನಗಿ, ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಬ್ಯಾಂಕ್‌ನಿಂದ ಸಾಲ ಪಡೆಯಲು ಅರ್ಹತೆ ಹೊಂದಿರುವ ಬಗ್ಗೆ ಮಂಜೂರಾತಿ/ದೃಢೀಕರಣ ಪತ್ರ ಹಾಗೂ ಇಲಾಖೆಯಿಂದ ನೀಡಲಾಗುವ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಡ್ಡಾಯವಾಗಿ ಪಡೆಯುವುದಾಗಿ ಪ್ರಮಾಣ ಪತ್ರ, ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ/ಮಂಡಳಿಗಳಲ್ಲಿ ಖಾಯಂ ನೌಕರಿಯಾಗಿಲ್ಲವೆಂಬ ಸ್ವಯಂ ಘೋಷಣೆಯನ್ನು ಸಲ್ಲಿಸಬೇಕು ಮತ್ತು ಅರ್ಜಿಯೊಂದಿಗೆ ಸಲ್ಲಿಸುವ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು.
Department of Tourism ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್, 3ನೇ ತಿರುವು ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಈ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಮಾ.13 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಆದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...