Wednesday, September 9, 2026
Wednesday, September 9, 2026

ಮೇ ತಿಂಗಳಿನಲ್ಲಿ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ

Date:

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ KRDCL ವತಿಯಿಂದ ರೂ. 125.67ಕೋಟಿಗಳ ಅಂದಾಜು ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ಮಸಾoತ್ಯದೊಳಗೆ ಜನಸಂಚಾರಕ್ಕೆ ಮುಕ್ತ ಗೊಳಿಸಿ ಕೊಡಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ಅವರು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಹಸಿರುಮಕ್ಕಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಹಿಂನೀರಿನ ಲಾಂಚ್ ನಲ್ಲಿ ಪ್ರಯಾಣಿಸಿ, ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿದರು.

ನಂತರ ಮಾತನಾಡಿದ ಅವರು ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಅಗತ್ಯವಿರುವ 56.14 ಕೋಟಿ ರೂ ಅನುದಾನವನ್ನು ಬಿಡುಗಡೆಗೊಳಿಸಿ, ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದ ಅವರು ಮೇ ಮಾಹೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆಗೊಳಿಸಲಾಗುವುದು ಎಂದರು.

ಈ ಸೇತುವೆಯ ನಿರ್ಮಾಣದಿಂದಾಗಿ ಶರಾವತಿ ಸಂತ್ರಸ್ತ ಗ್ರಾಮಗಳಿರುವ ಆರು ಪಂಚಾಯಿತಿಗಳ ನಿವಾಸಿಗಳಿಗೆ ಹಾಗೂ ಸಾಗರ ಪಟ್ಟಣದಿಂದ ಕೊಲ್ಲೂರಿಗೆ 32ಕೀ. ಮೀ. ಅಂತರ ಕಡಿತಗೊಳ್ಳಲಿದೆ ಎಂದರು.

ಪ್ರಸ್ತುತ ಪ್ರಗತಿಯಲ್ಲಿರುವ ಕಾಮಗಾರಿಯಲ್ಲಿ ಬಳಸಲಾಗುತ್ತಿರುವ ದೈತ್ಯ ಕಾಂಕ್ರೀಟ್ ಬ್ಲಾಕ್ ಗಳಲ್ಲಿ ಗುಣಮಟ್ಟದ ಕೊರತೆ ಹಾಗೂ ಬ್ಲಾಕ್ ನ ಕ್ಷಮತೆಯಲ್ಲಿ ನ್ಯೂನತೆಗಳಿದ್ದಿದ್ದರಿಂದಾಗಿ ಬದಲಿ ವ್ಯವಸ್ಥೆ ಕಲ್ಪಿಸುವಲ್ಲಿ ವಿಳಂಬ ವಾಗಿದೆ. ಅದಾಗಿಯೂ ಇನ್ನೂ ವಿಳಂಬಕ್ಕೆ ಅವಕಾಶ ವಿಲ್ಲದಂತೆ ಸೇತುವೆ ಲೋಕಾರ್ಪಣೆಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಸಾಗರ ಪಟ್ಟಣದ ರಸ್ತೆ ಅಗಲೀಕರಣ ಕಾಮಗಾರಿ ಕೈಗೆಟ್ಟಿಕೊಂಡಿದ್ದು, ಈಗಾಗಲೇ ಎರಡು ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಭೂ ಪರಿಹಾರ ಮೊತ್ತ ಉಳಿಕೆ 11ಕೋಟಿ ರೂ. ಗಳನ್ನು ಈ ಕೂಡಲೇ ಮಂಜೂರು ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮಾತನಾಡಿ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನವರ ಅಪೇಕ್ಷೆಯಂತೆ ಮಾನ್ಯ ಲೋಕೋಪಯೋಗಿ ಸಚಿವರು ಸೇತುವೆ ನಿರ್ಮಾಣ ಕಾರ್ಯಕ್ಕೆ ವೇಗ ಹೆಚ್ಚಿಸಿದ್ದು, ಶೀಘ್ರದಲ್ಲಿ ಲೋಕಾರ್ಪಣೆ ಮಾಡುವ ಭರವಸೆ ನೀಡಿರುವುದು ಸಂತಸ ತಂದಿದೆ ಎಂದ ಅವರು, ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಂಬಂದಿಸಿದ ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ಕರೆಸಿ, ನಡೆಸಿದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎಂದರು.

ಈ ಸೇತುವೆ ನಿರ್ಮಾಣ ಕಾರ್ಯದಲ್ಲಿ ಹಸಿರುಮಕ್ಕಿ ಭಾಗದ ನಿವಾಸಿಗಳು ಅತಿ ಹೆಚ್ಚು ಕಾತರರಾಗಿದ್ದಾರೆ ಎಂದರು.ಸದರಿ ಸೇತುವೆ ನಿರ್ಮಿಸುವುದರಿಂದ ಮದ್ಯ ಕರ್ನಾಟಕ, ಉತ್ತರ ಕರ್ನಾಟಕ ಭಾಗದಿಂದ ಕರಾವಳಿ ಭಾಗಕ್ಕೆ ಸಂಪರ್ಕ ಏರ್ಪಡ ಲಿದೆ. ಸಾಗರದಿಂದ ಕೊಲ್ಲೂರು, ಉಡುಪಿ, ಮುಂತಾದ ಯಾತ್ರಾ ಸ್ಥಳಗಳಿಗೆ ತೆರಳುವ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಮಂಗಳೂರು ಪಟ್ಟಣ, ಮಂಗಳೂರು ಬಂದರು ಮತ್ತು ಕುಂದಾಪುರ ಪಟ್ಟಣಗಳಿಗೆ ಸಮೀಪವಾಗಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...