DVS Institute ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆಯೊಂದಿಗೆ ಮನುಷ್ಯ ಕಾಲದೊಂದಿಗೆ ವೇಗವಾಗಿ ಹೆಜ್ಜೆ ಇಡುತ್ತಿದ್ದಾನೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1, 2 ಮತ್ತು 3ರ ವತಿಯಿಂದ ಕೋಹಳ್ಳಿ ಆಯನೂರಿನಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಆಧುನಿಕ ಬದುಕಿನ ಶೈಲಿಯು ಯಾಂತ್ರಿಕವಾಗಿದ್ದು, ಮಾನವೀಯ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ತಿಳಿಸಿದರು.
ಡಿವಿಎಸ್ ಸಂಸ್ಥೆ ಕಾರ್ಯದರ್ಶಿ ಎಸ್.ಪಿ.ದಿನೇಶ್ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮೀಣ ಜೀವನದ ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಶಿಬಿರಗಳು ಉಪಯುಕ್ತವಾಗಿವೆ. ಎನ್ಎಸ್ಎಸ್ ವಿದ್ಯಾರ್ಥಿಗಳು ಜೀವನ ಕೌಶಲ್ಯಗಳನ್ನು ಪಡೆದುಕೊಳ್ಳಲು ಒಂದು ಉತ್ತಮ ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವಿಎಸ್ ಸಂಸ್ಥೆಯ ಅಧ್ಯಕ್ಷ ಕೆ.ಬಸಪ್ಪಗೌಡ ಮಾತನಾಡಿ, ಭಾರತ ದೇಶವು ಬಹು ಸಂಸ್ಕೃತಿಯ ನಾಡಾಗಿದೆ. ಇಲ್ಲಿ ಅನೇಕ ವೈಶಿಷ್ಟಗಳಿವೆ. ಗಾಂಧೀಜಿ ಅವರ ಕನಸಾದ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಬೇಕಿದೆ, ಅದಕ್ಕಾಗಿ ಎನ್ಎಸ್ಎಸ್ ಉದ್ದೇಶಗಳು ದೇಶವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
DVS Institute ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಮಂಜುನಾಥ ಶೆಟ್ಟಿ ಅವರು ಕೋಹಳ್ಳಿ ದೇವಸ್ಥಾನದ ಇತಿಹಾಸ ಮತ್ತು ಮಹತ್ವವನ್ನು ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಕೇಶವನ್ ನಾಯರ್ ಎನ್.ವಿ., ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಐಕ್ಯೂಎಸಿ ಸಂಚಾಲಕ ಪ್ರೊ. ಎನ್.ಕುಮಾರಸ್ವಾಮಿ, ಕಾರ್ಯಕ್ರಮಾಧಿಕಾರಿ ಡಾ. ಡಿ.ಬಿ.ಶಿವರುದ್ರಪ್ಪ, ಅರ್ಪಿತಾ ಪಿ, ಡಾ. ಶಿವಶಂಕರ್ ಎಂ.ಕಿನ್ನಾಳ್, ಅಧ್ಯಾಪಕರಾದ ಕೇತನಾ ಆರ್ತಿ, ಡಾ. ದುರ್ಗಪ್ಪ ಮುಂಡಗಿ, ಡಾ. ಮಂಜುನಾಥ್, ಡಾ. ಶ್ರೀನಿವಾಸ್ ಲಮಾಣಿ, ಸಚಿನ್ ಕೆ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.
DVS Institute ಆಧುನಿಕ ಬದುಕಿನ ಶೈಲಿಯು ಯಾಂತ್ರಿಕವಾಗಿದ್ದು, ಮಾನವೀಯ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ:ಆಯನೂರು ಮಂಜುನಾಥ್
Date:
