Thursday, September 17, 2026
Thursday, September 17, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖಾ ನೌಕರರಿಂದ ಮನವಿ ಸಲ್ಲಿಕೆ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖಾ ನೌಕರರ ಸಂಘದ ನೇತೃತ್ವದಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲ ವೃಂದ ಸಂಘದಿಂದ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ನೇತೃತ್ವ ವಹಿಸಿದ್ದ ಆರೋಗ್ಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಜಿ.ಇ. ನಾಗರಾಜ್ ಮಾತನಾಡಿ, ಮೊದಲ ಹಂತದಲ್ಲಿ ಮಾ. 11ರಿಂದ ಮಾ.15ರ ವರೆಗೆ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಮತ್ತು ಡಿಸ್ಪೆನ್ಸರಿಗಳಲ್ಲಿನ ಎಲ್ಲ ವೃಂದದ ವೈದ್ಯರು, ಅಧಿಕಾರಿ-ನೌಕರರು ಕಪ್ಪು ಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ, ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.

ಸರ್ಕಾರ ಸ್ಪಂದಿಸದಿದ್ದರೆ ಮಾ. 16ರಿಂದ ಬೇಡಿಕೆ ಈಡೇರುವವರಿಗೂ ರಾಜ್ಯದ ಆರೋಗ್ಯ ಇಲಾಖೆಯ ಎಲ್ಲ ವೈದ್ಯರು, ಅಧಿಕಾರಿಗಳು, ನೌಕರರು ಕರ್ತವ್ಯಕ್ಕೆ ಅನಿರ್ಧಿಷ್ಟಾವಧಿವರೆಗೆ ಗೈರುಹಾಜರಾಗಿ ಮುಷ್ಕರ ನಡೆಸಲಾಗುವುದು. ಔಷಧಿಗಳ ಸರಬರಾಜು, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಮುಂಬಡ್ತಿ, ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ, ಖಾಲಿ ಹುದ್ದೆಗಳ ಭರ್ತಿ, ಕೇಂದ್ರ ಪುರಸ್ಕೃತ ಯೋಜನೆ ಅಡಿ ಕಾರ್ಯನಿರತ ನೌಕರರಿಗೆ ಹಲವಾರು ವರ್ಷಗಳಿಂದ 3-4 ತಿಂಗಳಿಗೊಮ್ಮೆ ವೇತನ ಭತ್ಯೆಗಳನ್ನು ನೀಡುತ್ತಿದ್ದು, ಪ್ರತಿ ತಿಂಗಳ ಮೊದಲ ವಾರದಲ್ಲಿ ವೇತನ ಭತ್ಯೆಗಳನ್ನು ನೀಡುವುದು ಸೇರಿ 11 ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ಆರೋಗ್ಯ ಇಲಾಖಾ ನೌಕರರ ಸಂಘದ ಕಾರ್ಯಾಧ್ಯಕ್ಷ ಡಾ. ಪ್ರಭು ಸಾಹುಕಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಮಂಜುನಾಥ್, ತಾಲೂಕು ವೈದ್ಯಾಧಿಕಾರಿ ಡಾ. ನೂತನ್ ನಾಯ್ಕ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಯಾನಂದ, ಡಾ. ವಿನಯ್ ಪಾಟೀಲ್, ಡಾ. ರಾಘವೇಂದ್ರ ಸೇರಿದಂತೆ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖಾ ನೌಕರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...