B. Y. Raghavendra ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಅನನ್ಯವಾದುದು. ಶಿಕಾರಿಪುರದ ಜನತೆಯ ಬಹುದಿನಗಳ ಕನಸಾಗಿದ್ದ ಸುಸಜ್ಜಿತ ಕನ್ನಡ ಸಾಹಿತ್ಯ ಪರಿಷತ್ ಸಭಾ ಭವನವನ್ನು ಸಂಸದ ಬಿ.ವೈ.ರಾಘವೇಂದ್ರಇಂದು ಸಂಭ್ರಮದಿಂದ ಉದ್ಘಾಟಿಸಿದರು.
ಕನ್ನಡದ ಸಾಹಿತ್ಯಿಕ ಚಟುವಟಿಕೆಗಳಿಗೆ, ವಿಚಾರಗೋಷ್ಠಿಗಳಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಈ ನೂತನ ಭವನವು ಸಾಕ್ಷಿಯಾಗಲಿದ್ದು, ನಮ್ಮ ತಾಲ್ಲೂಕಿನ ಸಾಹಿತ್ಯಾಸಕ್ತರಿಗೆ ಮತ್ತು ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡಲಿ ಎಂದು ಬಿ.ವೈ.ರಾಘವೇಂದ್ರ ಹಾರೈಸಿದರು.
B. Y. Raghavendra ಈ ಸಂದರ್ಭದಲ್ಲಿ ಶಿಕಾರಿಪುರ ಕ್ಷೇತ್ರದ ಜನಪ್ರಿಯ ಶಾಸಕರಾದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರು, ಮುಖಂಡರಾದ ಶ್ರೀ ಮಂಜುನಾಥ್, ಶ್ರೀ ರಮೇಶ್, ಶ್ರೀ ಎಂ.ಎಂ. ಸ್ವಾಮಿ, ಶ್ರೀ ಶಿವಾನಂದ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
