Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸಂಸ್ಥಾಪಕರ ದಿನಾಚರಣೆ 2025ರ ಪ್ರಯುಕ್ತ ವಾಣಿಜ್ಯ ಉದ್ಯಮಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಐವತ್ತು ವರ್ಷದಿಂದ ಕರಕುಶಲ ಮತ್ತು ಗುಡಿ ಕೈಗಾರಿಕೆ ಉತ್ಪನ್ನಗಳಿಗೆ ರಾಜ್ಯಾದ್ಯಂತ ಹೆಸರುವಾಸಿಯಾದ ನ್ಯೂ ಕಿಶನ್ ಹ್ಯಾಂಡಿಕ್ರಾಫ್ಟ್. ಮಾಲೀಕ ಬಿ.ಆರ್.ಸಂತೋಷ್, ಐದು ದಶಕಗಳಿಗಿಂತ ಹೆಚ್ಚು ಕಾಲ ದಿನಸಿ ಉತ್ಪನ್ನಗಳ ಮಾರಾಟಕ್ಕೆ ಹೆಸರುವಾಸಿಯಾದ ಪಾಲುದಾರಿಕೆ ಸಂಸ್ಥೆ ರವಿ ಟ್ರೇಡರ್ಸ್ ಪಾಲುದಾರರಾದ ಉಮೇಶ್, ಪ್ರಕಾಶ್, ರವಿ ಹಾಗೂ 35 ವರ್ಷಗಳಿಗಿಂತ ಮೇಲ್ಪಟ್ಟು ಔಷಧೋದ್ಯಮದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಅಶೋಕ್ ಫಾರ್ಮಾ ಮಾಲೀಕ ಮಧುಕರ್ ಶೆಟ್ಟಿ ಹಾಗೂ 35 ವರ್ಷಗಳಿಂದ ಮೇಲ್ಪಟ್ಟು ಲೆಕ್ಕಪರಿಶೋಧನಾ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ತೆರಿಗೆ ಸಲಹೆಗಾರ ಯು.ಮಧುಸೂದನ್ ಐತಾಳ್ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರತಿಷ್ಠಿತ ವಾಣಿಜ್ಯೋದ್ಯಮ ಪ್ರಶಸ್ತಿ ಹಾಗೂ ವಿಶೇಷ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ. ಸಂಸ್ಥಾಪಕರ ದಿನಾಚರಣೆ 2025ರ ಪ್ರಯುಕ್ತ ವಾಣಿಜ್ಯ ಉದ್ಯಮಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರತಿಷ್ಠಿತ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಎಫ್ ಕೆ ಸಿ ಸಿ ಐ ರಾಜ್ಯ ಅಧ್ಯಕ್ಷೆ ಉಮಾರೆಡ್ಡಿ ಅವರು ಪ್ರದಾನ ಮಾಡಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್ ಹಾಗೂ ಸಂಸ್ಥೆ ಮಾಜಿ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.
