ಫ್ರೆಂಡ್ಸ್ ಸೆಂಟರ್ ವತಿಯಿಂದ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನೂರಾರು ಜನರು ಪಾಲ್ಗೊಂಡು ಸಂಭ್ರಮ ಆಚರಿಸಿದರು.
ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಬಿ.ಧನರಾಜ್ ಮಾತನಾಡಿ, ಪ್ರೀತಿ, ಸ್ನೇಹ ಹಂಚುತ್ತ ಹೋಳಿ ಹಬ್ಬದ ಆಚರಣೆ ನಡೆಸುತ್ತಿದ್ದು, ಹೋಳಿ ಹಬ್ಬವು ಕೆಟ್ಟದ್ದನ್ನು ದಹಿಸಿ ಒಳ್ಳೆಯದನ್ನು ಅಳವಡಿಸಿಕೊಳ್ಳುವ ಒಂದು ಆಚರಣೆಯಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್, ಬಣ್ಣಗಳ ಹಬ್ಬ ಹೋಳಿ ಹಬ್ಬ ಎಲ್ಲಾ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ತರಲಿ ಎಂದು ಹಾರೈಸಿದರು.
ಮಾಜಿ ಅಧ್ಯಕ್ಷ ಎಸ್.ದತ್ತಾತ್ರೇಯ ಮಾತನಾಡಿ, ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತೀಕ. ಇವುಗಳ ಆಚರಣೆಯಿಂದ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ನೇತ್ರ ಭಂಡಾರದ ಅಧ್ಯಕ್ಷ ವಿ.ನಾಗರಾಜ್, ಮಾಜಿ ಅಧ್ಯಕ್ಷರಾದ ಬಿಂದು ವಿಜಯಕುಮಾರ್, ವೀರಣ್ಣ, ಮಲ್ಲಿಕಾರ್ಜುನ್ ಕಾನೂರ್, ಆರ್.ಮನೋಹರ, ಉಮೇಶ್ ಹಿರೇಮಠ, ರಂಜನಿ ದತ್ತಾತ್ರಿ, ಲತಾ ಶಂಕರ್ ಹಾಗೂ ಮಹಿಳಾ ವಿಭಾಗದ ಇನ್ನಿತರ ಸದಸ್ಯರುಗಳು ಹಾಜರಿದ್ದರು.
