Saturday, March 7, 2026
Saturday, March 7, 2026

Sahyadri Narayana Multi Specialty Hospital ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆ ಮತ್ತು ಸಲಹಾ ಶಿಬಿರ

Date:

Sahyadri Narayana Multi Specialty Hospital ಶಿವಮೊಗ್ಗ ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇದೇ ಸೋಮವಾರ, ಮಾರ್ಚ್ 9 ರಂದು ಸಾರ್ವಜನಿಕರಿಗಾಗಿ ಉಚಿತ ಮೂಳೆ ಸಾಂದ್ರತೆ (BMD) ತಪಾಸಣೆ ಮತ್ತು ವೈದ್ಯಕೀಯ ಸಲಹಾ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರವು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಸ್ಪತ್ರೆಯ ಆವರಣದಲ್ಲಿ ನಡೆಯಲಿದ್ದು, ಶಿಬಿರದಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ನೋಂದಣಿ, ಬಿಎಂಡಿ ಟೆಸ್ಟ್ (BMD Test) ಮತ್ತು ತಜ್ಞ ವೈದ್ಯರ ಸಮಾಲೋಚನೆ ಸಂಪೂರ್ಣ ಉಚಿತವಾಗಿರುತ್ತದೆ.

ಈ ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಚೇತನ್ ಎಂ.ಎಲ್ ಮತ್ತು ಡಾ. ನಾಗೇಂದ್ರ ಪ್ರಸಾದ್ ಎಂ.ಆರ್, ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ರಾಘವೇಂದ್ರ ಭಟ್ ಮತ್ತು ಡಾ. ರಶ್ಮಿ ಸಿ. ಹಂಚಿನಾಳ್ ಅವರು ಲಭ್ಯವಿದ್ದು, ರೋಗಿಗಳಿಗೆ ಉಚಿತ ತಪಾಸಣೆ ಮತ್ತು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ.

ಜನರಲ್ಲಿ, ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ಮಹಿಳೆಯರಲ್ಲಿ ಮೂಳೆಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಆಸ್ಟಿಯೋಪೊರೋಸಿಸ್ (ಮೂಳೆ ಸವೆತ) ನಂತಹ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

Sahyadri Narayana Multi Specialty Hospital ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ ಆಸ್ಪತ್ರೆಯನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಕ್ರೀಡೆಯಲ್ಲಿ ಸ್ಪರ್ಧಾಮನೋಭಾವ ಮುಖ್ಯ, ಸೋಲು-ಗೆಲುವು ಅಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಸೋಲು-ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಭಾಗವಹಿಸುವಿಕೆ ಮತ್ತು ಸ್ಪರ್ಧಾ...

Shikaripura Horticulture Department ಉಚಿತ ತರಕಾರಿ ಬೀಜಗಳನ್ನು ಪಡೆಯಲು ಅರ್ಜಿ ಆಹ್ವಾನ

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ...

Information and Public Relations Department ಭೀಮ ಗಾಯನದ ಮೂಲಕ ಸಮಾಜವನ್ನು ಎಚ್ಚರಿಸುವ ಕೆಲಸ ಪರಿಣಾಮಕಾರಿ : ಚಂದ್ರಭೂಪಾಲ

Information and Public Relations Department ಅಂಬೇಡ್ಕರ್, ಬುದ್ದ ಮತ್ತು ಬಸವಣ್ಣನಂತಹವರು...

ಪತ್ರಿಕಾ ವಿತರಕ ಕಿರಣ್ ನಿಧನ

ಶಿವಮೊಗ್ಗ ನಗರದ ಹೊಸಮನೆ ಬಡಾವಣೆ ನಿವಾಸಿ ಪತ್ರಿಕಾ ವಿತರಕ ಕಿರಣ್(೩೫)...