Monday, March 9, 2026
Monday, March 9, 2026

DVS Arts, Science and College ಎಲ್ಲ ಕ್ಷೇತ್ರಗಳಿಗೂ ಹಣ ಒದಗಿಸುವುದು ಬಜೆಟ್ ಆಶಯ : ಪ್ರೊ. ಚಂದ್ರಶೇಖರ್

Date:

DVS Arts, Science and College ಬಜೆಟ್ ಎಂಬುದು ರಾಜ್ಯದ ಜನರ ಕ್ಷೇಮಾಭಿವೃದ್ಧಿಯ ಸಂಕೇತ ಎಂದು ಸಾಗರದ ಇಂದಿರಾಗಾಂಧಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ್ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ಕಾಲೇಜಿನಲ್ಲಿ ಆಯೋಜಿಸಿದ್ದ “ಕರ್ನಾಟಕ ರಾಜ್ಯ ಬಜೆಟ್ 2026 ಒಂದು ವಿಶ್ಲೇಷಣೆ” ಕಾರ್ಯಕ್ರಮದಲ್ಲಿ ಮಾತನಾಡಿ, ಈ ಬಜೆಟ್ ಸಮತೂಕದ ಬಜೆಟ್ ಎಂದು ತಿಳಿಸಿದರು.

ಬಜೆಟ್ ಎಂಬುದು ಕೇವಲ ಕಾಗದದ ಪತ್ರಗಳಲ್ಲಿರುವ ಅಂಕಿ ಸಂಖ್ಯೆಗಳು ಮಾತ್ರವಲ್ಲ. ಒಂದು ರಾಜ್ಯದ ಜನರ ಕ್ಷೇಮಾಭಿವೃದ್ಧಿಯ ಸಂಕೇತ. ಬಹಳ ಮುಖ್ಯವಾಗಿ ಎಲ್ಲ ಸಮುದಾಯಗಳನ್ನು ಪರಿಗಣಿಸಿ ಎಲ್ಲ ಕ್ಷೇತ್ರಗಳಿಗೆ ಸಾಧ್ಯವಾದಷ್ಟು ಹೆಚ್ಚಿನ ಹಣಕಾಸಿನ ಸಂಪನ್ಮೂಲವನ್ನು ಒದಗಿಸಿರುವುದು ಈ ಬಜೆಟ್‌ನ ಮತ್ತೊಂದು ಮೈಲುಗಲ್ಲು ಎಂದು ಹೇಳಿದರು.

ಬಹಳ ಮುಖ್ಯವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಸಹ ಅದನ್ನು ಮೀರಿದ ಎಲ್ಲ ಜನರ ಯೋಗಕ್ಷೇಮದ ದೃಷ್ಟಿಯಿಂದ ಕೃಷಿ ವಲಯ, ಕೈಗಾರಿಕಾ ವಲಯ, ಸೇವಾ ವಲಯ ಮತ್ತು ಮಹಿಳಾ ಕ್ಷೇತ್ರಕ್ಕೂ ಕೂಡ ವಿಶೇಷ ಒತ್ತನ್ನು ಕೊಟ್ಟಿರುವುದು ಈ ಬಜೆಟ್‌ನಲ್ಲಿ ಕಂಡುಬರುತ್ತದೆ ಎಂದು ತಿಳಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ವೆಂಕಟೇಶ್ ಮಾತನಾಡಿ, ಕರ್ನಾಟಕದ ಬಜೆಟ್ ಎಲ್ಲ ಜನರನ್ನು ಒಳಗೊಂಡ ಒಂದು ವಿಶೇಷ ಬಜೆಟ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಜೆಟ್‌ನಲ್ಲಿ ಸಾರ್ವಜನಿಕರ ಹಿತಾಸಕ್ತಿಗಳನ್ನು ಗಮನಿಸಿ ಅದಕ್ಕೆ ತಕ್ಕ ಹಾಗೆ ಹಣಕಾಸಿನ ಸಂಪನ್ಮೂಲಗಳನ್ನು ಹಂಚಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

DVS Arts, Science and College ಅನೇಕ ದೂರ ದೃಷ್ಟಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ವಿಶೇಷವಾಗಿ ಈ ಮುಂಗಡ ಪತ್ರ ಜನಪ್ರಿಯ ಎನ್ನುವುದಕ್ಕಿಂತ ಜನಪರ ಬಜೆಟ್ ಅನ್ನು ಕರ್ನಾಟಕದ ಜನತೆಗೆ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಐಕ್ಯೂಎಂಸಿ ಸಂಯೋಜಕ ಕುಮಾರಸ್ವಾಮಿ, ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕಿ ರಂಜಿತಾ ಮತ್ತು ಶಿವಲಿಂಗಂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related