Saturday, June 20, 2026
Saturday, June 20, 2026

ಬಾಬಾ ಸಾಹೇಬರು ಭಾರತ ದೇಶದ ನಿಜ ಭಾಗ್ಯವಿಧಾತ: ಪಲ್ಲವಿ ಜಿ

Date:

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆ ತರಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟವರು ಡಾ. ಬಿ ಆರ್ ಅಂಬೇಡ್ಕರ್. ಅವರು ಭಾರತ ದೇಶದ ನಿಜ ಭಾಗ್ಯವಿಧಾತ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಅವರು ಅಭಿಪ್ರಾಯ ವ್ಯಕ್ತ ಪಡಿಸಿದರು.

ಬೆಂಗಳೂರು ನಗರದ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಡಾ, ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಇವರ ಸಹಯೋಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಏರ್ಪಡಿಸಿದ್ದ “ಭೀಮ ಗಾಯನ”ವಿಶೇಷ ಸಂಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ಸಂವಿಧಾನ ಪೀಠಿಕೆಯು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಐಕ್ಯತೆ ಮತ್ತು ಭ್ರಾತೃತ್ವದ ಬದ್ಧತೆಯನ್ನು ಪ್ರತಿಪಾದಿಸುತ್ತದೆ.ಅಂಬೇಡ್ಕರ್ ರಚಿತ ಈ ಸಂವಿಧಾನದ ಪೀಠಿಕೆಯೇ ಅವರು ಒಬ್ಬ ವಿಶ್ವ ಮಾನವ ಎಂಬುದನ್ನು ಸಾಬೀತು ಪಡಿಸುತ್ತದೆ ಎಂದ ಅವರು ಬಾಬಾ ಸಾಹೇಬರು ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಭಾರತದ ಎಲ್ಲ ಪ್ರಜೆಗಳ ಸಮಾನ ಹಕ್ಕುಗಳಿಗೆ ಹೋರಾಡಿದವರು. ಅವರ ಆಶಯ ಆದರ್ಶಗಳನ್ನು ಈ ದೇಶದ ಯುವ ಸಮುದಾಯ ಅರ್ಥ ಮಾಡಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ಕೊಟ್ಟರು.

ಮಹಿಳೆಯರಿಗೆ ಹೆಚ್ಚಿನ ಹಕ್ಕುಗಳನ್ನು ಪ್ರತಿಪಾದಿಸಿದ ಹಿಂದು ಕೋಡ್ ಬಿಲ್ಲನು ತಿರಸ್ಕರಿಸಿದ ಸಂದರ್ಭದಲ್ಲಿ ಅಂಬೇಡ್ಕರ್ ಅವರು ತಮ್ಮ ಸಚಿವ ಪದವಿಗೆ ರಾಜಿನಾಮೆ ನೀಡುತ್ತಾರೆ. ಅಂತಹ ಕಾರ್ಯ ನಿಷ್ಠೆ ಇಂದಿನ ಸಂದರ್ಭದಲ್ಲಿ ಕಾಣುವುದೇ ಅತ್ಯಂತ ವಿರಳ. ಹಾಗಾಗಿ ಅಂಬೇಡ್ಕರ್ ಇಂದಿಗೂ ನಮಗೆ ಅತ್ಯಂತ ಪ್ರಸ್ತುತ ಎಂದ ಅವರು, ದೇಶದಲ್ಲಿ ಮಹಿಳೆಯರನ್ನು ಒಂದು ವರ್ಗವನ್ನಾಗಿಸಿ ಮನೆಗೆ ಸೀಮಿತವಾಗಿರಿಸಿದ್ದ ಪರಿಸ್ಥಿತಿ ಒಂದು ಕಾಲದಲ್ಲಿ ಇತ್ತು, ಅಂತಹ ಸಂದರ್ಭದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಅವರು ಮಹಿಳೆಯರ ಶಿಕ್ಷಣಕ್ಕೆ ಹೋರಾಡಿದವರು. ಇಂದು ಅವರ ಪುಣ್ಯಸ್ಮರಣೆಯ ದಿನದಂದು ನಾವೆಲ್ಲರೂ ಕೃತಜ್ಞತಾ ಭಾವದಿಂದ ಅವರನ್ನು ನೆನೆಯಬೇಕಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...