ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಯುವ ಬರಹಗಾರರ ಚೊಚ್ಚಲ ಕೃತಿಗೆ ಆಯ್ಕೆಯಾದ ಲೇಖಕರು ಮತ್ತು ಕವಿಗಳನ್ನು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಮಂಗಳವಾರ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಆಯ್ಕೆಯಾದ ಶಿರಾಳಕೊಪ್ಪದ ಲೇಖಕ ಎಂ ನವೀನ್ ಕುಮಾರ್ ಅವರ ‘ಬುದ್ಧಿವಂತರು ಬಡವರಾಗುವುದು ಏಕೆ?’ ಕೃತಿ ಹಾಗೂ ಶಿಕಾರಿಪುರದ ಶ್ರೀದೇವಿ ಭುಜಂಗಪ್ಪ ಅವರ ‘ಇವನೇ ಕವನ’ ಸಂಕಲನಕ್ಕೆ ಗೌರವ ಸಲ್ಲಿಸಲಾಯಿತು. ಖ್ಯಾತ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಇವರಿಗೆ ಸನ್ಮಾನಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ, ಖ್ಯಾತ ಸಾಹಿತಿ ಹಂಪನಾ, ಕವಿ ಸತೀಶ್ ಕುಲಕರ್ಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್, ನಿರ್ದೇಶಕ ಡಾ. ಕೆ.ಬಿ. ಮಂಜುನಾಥಯ್ಯ, ಪ್ರಾಧಿಕಾರದ ಸದಸ್ಯ ಲಕ್ಷ್ಮಣ್ ಕೂಡಸೆ, ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಡಾ. ಬಿ.ಸಿ. ಕುಶಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಹೊಸ ಸಾಹಿತ್ಯ ಕೃತಿಗಳನ್ನು ಹೊರತರುವ ಲೇಖಕರಿಗೆ ಇದು ಪ್ರೇರಣೆಯಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಶಿಕಾರಿಪುರದ ಇಬ್ಬರು ಯುವ ಬರಹಗಾರರಿಗೆ ಸನ್ಮಾನ
Date:
