Wednesday, March 11, 2026
Wednesday, March 11, 2026

Department of Kannada and Culture ವಚನ ಕಲ್ಯಾಣ-ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

Date:

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ವಚನ ಕಲ್ಯಾಣ’ ಎಂಬ ಅಹೋರಾತ್ರಿ (9 ಗಂಟೆಗಳ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದ್ದು, ನುರಿತ ಹಾಗೂ ಆಸಕ್ತ ಯುವಕ/ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು/ಗಾಯಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಯೋಮಿತಿ 18 ರಿಂದ 40 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದ್ದು ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕದಲ್ಲಿ ಅಭಿನಯಿಸಿದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ನಮೊನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್ ವಿಳಾಸ kannadasiri.karnataka.gov.in ಇಲ್ಲಿ ಪಡೆದು, ಮಾ.20 ರೊಳಗಾಗಿ ಅರ್ಜಿಯನ್ನು ಭರ್ತಿಮಾಡಿ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ಅಥವಾ ಇಮೇಲ್ ವಿಳಾಸ kanakaresearchcenter@gmail.com ಮೂಲಕ ಸಲ್ಲಿಸಲು ಕೋರಿದೆ.
Department of Kannada and Culture ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲದ ಅವಧಿಯಲ್ಲಿ ಪೂರ್ಣಕಾಲಿಕ ತರಬೇತಿ ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿದ್ದು, ಮಾಸಿಕ ಗೌರವಧನ ಮತ್ತು ಊಟ-ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಹಾಗೂ ಸಂದರ್ಶನಕ್ಕೆ ಹಾಜರಾಗುವ ಕಲಾವಿದರಿಗೆ ಇಲಾಖೆಯು ಯಾವುದೇ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವಚನ ಕಲ್ಯಾಣ ನಾಟಕದ ನಿರ್ದೇಶಕರಾದ ಬಸಲಿಂಗಯ್ಯ ಅಥವಾ ದೂ.ಸಂ:94485 38620 ನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಶಾಸಕ ಎಸ್.ಎನ್. ಚನ್ನಬಸಪ್ಪನವರಿಂದ ಸಿಎಂ ಭೇಟಿ, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ಮನವಿ

CM Siddaramaiah ಶಿವಮೊಗ್ಗದ ಶಾಸಕರಾದ ಎಸ್.ಎನ್. ಚೆನ್ನಬಸಪ್ಪನವರ ಕಚೇರಿಗೆ ಕ್ಯಾನ್ಸರ್‌ನಂತಹ ಮಾರಣಾಂತಿಕ...

D.K. Shivakumar ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಉಪಮುಖ್ಯಮಂತ್ರಿ ಡಿ‌.ಕೆ. ಶಿವಕುಮಾರ್

D.K. Shivakumar ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಮಾನ್ಯ...

Klive Special Article ಮೂತ್ರಪಿಂಡದ ಕಾಯಿಲೆ – ಒಂದು ನಿಶಬ್ದ ಹಂತಕ, ಇದನ್ನು ನೀವು ತಡೆಯಬಹುದು

Klive Special Article ಮೂತ್ರಪಿಂಡಗಳು (ಕಿಡ್ನಿ) ನಮ್ಮ ದೇಹದ ಅತ್ಯಂತ...

Renukacharya Jayanti ಮಾ.16ರ ಮತ್ತು ಮಾ. 17ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

Renukacharya Jayanti ಸೊರಬ ತಾಲೂಕಿನ ಸುಕ್ಷೇತ್ರ ದುಗ್ಲಿಯ ಶ್ರೀಮದ್ ರಂಭಾಪುರಿ ಶಾಖಾ...