Wednesday, March 11, 2026
Wednesday, March 11, 2026

Renukacharya Jayanti ಮಾ.16ರ ಮತ್ತು ಮಾ. 17ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

Date:

Renukacharya Jayanti ಸೊರಬ ತಾಲೂಕಿನ ಸುಕ್ಷೇತ್ರ ದುಗ್ಲಿಯ ಶ್ರೀಮದ್ ರಂಭಾಪುರಿ ಶಾಖಾ ಶ್ರೀ ಗುರು ರೇವಣಸಿದ್ಧೇಶ್ವರ ಮಠದ ಆವರಣದಲ್ಲಿ ಮಾ.16ರ ಸೋಮವಾರ ಮತ್ತು ಮಾ. 17ರ ಮಂಗಳವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಶ್ರೀ ರೇವಣ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಸೊರಬ ಪಟ್ಟಣದ ನಿಜಗುಣ ರೆಸಿಡೆನ್ಸಿ ಸಭಾಂಗಣದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾ. 16ರಂದು ಸಂಜೆ 4ಕ್ಕೆ ಗಂಗಾಪೂಜೆ, ಶ್ರೀ ಜಗದ್ಗುರು ಪಂಚಾಚಾರ್ಯ ಧ್ವಜಾರೋಹಣ, ಸಂಜೆ ೬ಕ್ಕೆ ಕಲಶಾರಾಧನೆ, ಶ್ರೀ ದುರ್ಗಾಹೋಮ ಪೂರ್ಣಾಹುತಿ ಮಹಾಮಂಗಳಾರತಿ ನಂತರ ಶ್ರೀ ಚೌಡೇಶ್ವರಿ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಮಾ. ೧೭ರಂದು ಜಗುದ್ಗುರು ರೇಣುಕಾರ್ಯರಿಗೆ, ಶ್ರೀ ವೀರಭದ್ರಸ್ವಾಮಿಗೆ, ಶ್ರೀ ಚೌಡೇಶ್ವರಿ ದೇವಿಗೆ, ಲಿಂ. ಶ್ರೀ ಮುರುಘೇಂದ್ರ ಸ್ವಾಮಿ ಅವರ ಗದ್ದುಗೆಗೆ, ಶ್ರೀ ಬಸವೇಶ್ವರ ಸ್ವಾಮಿಗೆ ಮತ್ತು ಶ್ರೀ ನಾಗಮೂರ್ತಿಗೆ ರುದ್ರಾಭಿಷೇಕ ಶಿವಾಷ್ಟೋತ್ತರ ವಿಶೇಷ ಅಲಂಕಾರ ಮತ್ತು ಮಹಾ ಮಂಗಳಾರತಿ ನಡೆಯಲಿದ್ದು, ನಂತರ ಶ್ರೀ ಜಗದ್ಗುರು ರೇವಣ ಸಿದ್ಧೇಶ್ವರರ ಪಲ್ಲಕ್ಕಿ ಉತ್ಸವ ಸಕಲ ವಾಧ್ಯಮೇಳದೊಂದಿಗೆ ಗ್ರಾಮದಲ್ಲಿ ಜರುಗಲಿದೆ. ಬೆಳಗ್ಗೆ 10ಕ್ಕೆ ಕಾಳಸರ್ಪ ನಿವಾರಣೆಗೆ ಆಶ್ಲೇಷ ಬಲಿ, ಸರ್ಪಶಾಂತಿ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾಧ ವಿನಿಯೋಗ ನಡೆಯಲಿದೆ ಎಂದರು.
ಮಹಾರಥೋತ್ಸವ: ಸಂಜೆ 4ಕ್ಕೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ ಆಗಮನವಾಗಲಿದ್ದು, ನಂತರ ಜಗದ್ಗುರು ಶ್ರೀ ರೇವಣ ಸಿದ್ಧೇಶ್ವರ ಮಹಾರಥೋತ್ಸವ ಸಕಲ ವಾಧ್ಯ ವೈಭವದೊಂದಿಗೆ ವಿಜೃಂಭಣೆಯಿಂದ ಜರುಗಲಿದೆ. ಶ್ರೀ ಶಿವಕುಮಾರ ಶಾಸ್ತ್ರೀ ಹಿರೇಮಠ ಹಾಗೂ ಶ್ರೀ ಮಠದ ಪರೋಹಿತ ಬಳಗದಿಂದ ವೈದಿಕ ಸೇವೆ ನಡೆಯಲಿದೆ. ವಿಶೇಷವಾಗಿ ಈ ಬಾರಿ ಶ್ರೀ ವೀರಭದ್ರೇಶ್ವರ ಮೂರ್ತಿಯ ಪ್ರತಿಷ್ಟಾಪನೆಯ ವರ್ಷಾಚರಣೆ ಅಂಗವಾಗಿ ಶರಬಿ ಗುಗ್ಗಳ ನಡೆಯಲಿದೆ ಎಂದರು.
ಧರ್ಮ ಸಮಾರಂಭ: ಶ್ರೀ ಮಠದ ಆವರಣದಲ್ಲಿ ಸಂಜೆ 5:30ಕ್ಕೆ ಶ್ರೀ ಕ್ಷೇತ್ರದ ಜಾತ್ರಾ ಮಹೋತ್ಸವ ಮತ್ತು ಲಂಗೈಕ್ಯ ಪೂಜ್ಯರ ಪುಣ್ಯಸ್ಮರಣೆ ಅಂಗವಾಗಿ ಧರ್ಮ ಸಮಾರಂಭ ನಡೆಯಲಿದ್ದು, ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸುಳ್ಳ ಪಂಗೃಹ ಹಿರೇಮಠದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. Renukacharya Jayanti ಸಮಾರಂಭವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಲಿಂ. ಶ್ರೀಗಲ ಭಾವಚಿತ್ರವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಬಿಡುಗಡೆ ಮಾಡಲಿದ್ದು, ಮುಂಡಗೋಡ ಮಾಜಿ ಶಾಸಕ ವಿ.ಎಸ್. ಪಾಟೀಲ್, ಈಡಿಗ ಸಮಾಜದ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಗುರುಕುಮಾರ ಪಾಟೀಲ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ ಅಗಸನಹಳ್ಳಿ, ವಿವಿಧ ಸಮಾಜ ಪ್ರಮುಖರಾದ ಎನ್. ಸುರೇಶ್, ಎಚ್. ಮಲ್ಲಿಕಾರ್ಜುನಪ್ಪ, ಪಿಡಿಓ ಮಲ್ಲಮ್ಮ ಕಬ್ಬೂರು, ಮೆಸ್ಕಾಂ ಜೆಇ ಬಾಲರಾಜ್ ನಾಗರಾಳ ಸೇರಿದಂತೆ ಇತರರು ಪಾಲ್ಗೊಳ್ಳುವರು. ಸಭಾ ಕಾರ್ಯಕ್ರಮದಲ್ಲಿ ಶ್ರೀಗಳ ದ್ವಾದಶ ಪಟ್ಟಾಧಿಕಾರ ವರ್ಧಂತಿ ವರ್ಷಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರಗಳ ಸಾಧಕರಿಗೆ ಶ್ರೀ ಗುರು ರೇವಣಸಿದ್ಧೇಸ್ವರ ಸದ್ಭಾವನಾ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜಗೌಡ ಚಿಕ್ಕಾವಲಿ, ಟೌನ್ ವೀರಶೈವ ಸಮಾಜದ ಅಧ್ಯಕ್ಷ ವಿಶ್ವನಾಥ ಗೌಡ, ಪ್ರಮುಖರಾದ ಸಿ.ಪಿ. ವೀರೇಶ್ ಗೌಡ, ಮಲ್ಲಿಕಾರ್ಜುನ ನಿಜಗುಣ, ಚಂದ್ರಶೇಖರ ನಿಜಗುಣ, ವಿಜೇಂದ್ರಗೌಡ ತಲಗುಂದ, ಶಶಿಕಾಂತ ಗೌಡ ಬೆನ್ನೂರು, ಜಗದೀಶಗೌಡ ತ್ಯಾವಗೋಡು, ಗಂಗಾಧರ ಗೌಡ ಗುಡುವಿ, ಸತೀಶ್‌ಗೌಡ ಗುಂಜನೂರು, ಗುರುಪ್ರತೀಕ್ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಶಾಸಕ ಎಸ್.ಎನ್. ಚನ್ನಬಸಪ್ಪನವರಿಂದ ಸಿಎಂ ಭೇಟಿ, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ಮನವಿ

CM Siddaramaiah ಶಿವಮೊಗ್ಗದ ಶಾಸಕರಾದ ಎಸ್.ಎನ್. ಚೆನ್ನಬಸಪ್ಪನವರ ಕಚೇರಿಗೆ ಕ್ಯಾನ್ಸರ್‌ನಂತಹ ಮಾರಣಾಂತಿಕ...

D.K. Shivakumar ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಉಪಮುಖ್ಯಮಂತ್ರಿ ಡಿ‌.ಕೆ. ಶಿವಕುಮಾರ್

D.K. Shivakumar ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಮಾನ್ಯ...

Klive Special Article ಮೂತ್ರಪಿಂಡದ ಕಾಯಿಲೆ – ಒಂದು ನಿಶಬ್ದ ಹಂತಕ, ಇದನ್ನು ನೀವು ತಡೆಯಬಹುದು

Klive Special Article ಮೂತ್ರಪಿಂಡಗಳು (ಕಿಡ್ನಿ) ನಮ್ಮ ದೇಹದ ಅತ್ಯಂತ...

ಸೇವಿಸುವ ಆಹಾರವು ಉತ್ತಮ ಗುಣಮಟ್ಟದ್ದಾಗಿದ್ದಲ್ಲಿ ಆರೋಗ್ಯವು ಉತ್ತಮ : ಎಸ್‌.ಪಿ ಪರಮೇಶ್ವರ್ ಹೆಚ್

ಸೇವಿಸುವ ಆಹಾರವು ಉತ್ತಮ ಗುಣಮಟ್ಟದ್ದಾಗಿದ್ದಲ್ಲಿ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ದಾವಣಗೆರೆ ಜಿಲ್ಲಾ...