Monday, March 16, 2026
Monday, March 16, 2026

ನಾಪತ್ತೆಯಾಗಿದ್ದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Date:

ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಹುಂಚ ಸಮೀಪದ ಮಾರ್ನಮಿಬೈಲು ನಿವಾಸಿ ಧನುಷ್ ಎನ್.ಎಸ್. (25) ಎಂದು ಗುರುತಿಸಲಾಗಿದೆ.

ಧನುಷ್ ಕಳೆದ 19-01-2026 ರಂದು ಮನೆಯಿಂದ ಹೊರಟು ಹೋದ ಅವರು ನಂತರ ಮರಳಿ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಕುಟುಂಬದವರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದೀಗ ಯುವಕನ ಮೃತದೇಹ 5MS ಪ್ರದೇಶದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಯುವಕನ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...

Inner Wheel Shivamogga ಮಹಿಳಾ ದಿನಾಚರಣೆ: ಶಿವಮೊಗ್ಗದ ಸಾಧಕಿಯರಿಗೆ ಸನ್ಮಾನ

Inner Wheel Shivamogga ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ...