Thursday, April 30, 2026
Thursday, April 30, 2026

Department of Kannada and Culture ವಚನ ಕಲ್ಯಾಣ 9 ಗಂಟೆಗಳ ನಾಟಕ ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

Date:

Department of Kannada and Culture ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ ವಚನ ಕಲ್ಯಾಣ ‘ಎಂಬ ಅಹೋರಾತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಇಲಾಖೆ ಉದ್ದೇಶಿಸಿದೆ. ಆ ಸಂಬಂಧ ನುರಿತ ಹಾಗೂ ಆಸಕ್ತ ಯುವಕ ಯುವತಿಯರು ಹಾಗೂ ಅನುಭವಿ ರಂಗಕಲಾವಿದರು/ಗಾಯಕರುಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ (ಅರ್ಜಿ ಲಗತ್ತಿಸಿದೆ), ವಯೋಮಿತಿ 18 ರಿಂದ 40 ವರ್ಷಗಳು ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಅದ್ಯತೆಯನ್ನು ನೀಡಲಾಗುವುದು. ತುಂಬಿದ ಅರ್ಜಿಗಳನ್ನು ದಿನಾಂಕ 20ಮಾರ್ಚ್2026ರ ಒಳಗೆ ಸದಸ್ಯ ಕಾರ್ಯದರ್ಶಿ ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056. ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ತಲುಪುವಂತೆ ಅಥವಾ ಮೇಲ್ ವಿಳಾಸ: kanakaresearchcentre@gmail.com ದ ಮೂಲಕ ಸಲ್ಲಿಸಲು ಕೋರಿದೆ.

Department of Kannada and Culture ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲದ ಅವಧಿಯಲ್ಲಿ ಪೂರ್ಣಕಾಲಿಕವಾಗಿ ತರಬೇತಿ-ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯ. ಮಾಸಿಕ ಗೌರವಧನ ಮತ್ತು ಊಟ -ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಅರ್ಜಿಯ ನಮೂನೆಯನ್ನು ಕನ್ನಡ ಸಂಸ್ಕೃತಿ ಇಲಾಖೆಯ ವೆಬ್ ಸೈಟ್ kannadasiri.karnataka.gov.inನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿ ವಿವರಗಳಿಗಾಗಿ ಶ್ರೀ ಸಿ. ಬಸವಲಿಂಗಯ್ಯ(ವಚನ ಕಲ್ಯಾಣ ನಾಟಕದ ನಿರ್ದೇಶಕರು) ಇವರಲ್ಲಿ ಮಾಹಿತಿ ಪಡೆಯಬಹುದು ಮೊಬೈಲ್ ಸಂಪರ್ಕ ಸಂಖ್ಯೆ- 94485 38620. ಸಂದರ್ಶನಕ್ಕೆ ಹಾಜರಾಗುವ ಕಲಾವಿದರಿಗೆ ಇಲಾಖೆಯು’ ಯಾವುದೇ ಭತ್ಯೆ ನೀಡಲಾಗುವುದಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...

Revenue Department ಮೇ 1 & 2 ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ

Revenue Department ಕಂದಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ...

Klive Special Article ವಿಶಿಷ್ಟಾವತಾರಾ.. ನರಸಿಂಹಾವತಾರ ...

Klive Special Article ವಿಷ್ಣುವಿನ ದಶಾವತಾರದಲ್ಲಿ ನಾಲ್ಕನೇ ಅವತಾರವೇ ನೃಸಿಂಹಾವತಾರ.ದಶಾವತಾರದಲ್ಲಿ ಇದೊಂದು...