ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ಶಿವಮೊಗ್ಗ ಇವರ ವತಿಯಿಂದ 2025-26 ನೇ ಸಾಲಿನ ಮಾರ್ಚ್ 15 ರ ಭಾನುವಾರದಂದು ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ವಿಶೇಷ ವಸೂಲಾತಿ ಕೌಂಟರ್ಗಳನ್ನು ಕೆಳಕಂಡ ಸ್ಥಳಗಳಲ್ಲಿ ತೆರೆಯಲಾಗಿದೆ.
ಹೊಸಮನೆ ಮುಖ್ಯರಸ್ತೆ, ಚರ್ಚ್ ಎದುರು ,ಮಂಡ್ಲಿ ವೃತ್ತ, ಎನ್ ಟಿ ರಸ್ತೆ ಮಂಡ್ಲಿ ಆಟೋ ಸ್ಟಾö್ಯಂಡ್ ಹತ್ತಿರ, ನವುಲೆ ಮುಖ್ಯ ರಸ್ತೆ ನವುಲೆ ಆರ್ಚ್ ಹತ್ತಿರ, ಅಶೋಕನಗರ ನಂದಿನಿ ಬೂತ್ ಪೋಲಿಸ್ ಕ್ವಾಟ್ರಸ್ ಹತ್ತಿರ, ವಿನೋಬ ನಗರ ಪೋಲಿಸ್ ಠಾಣೆ ಎದುರಿಗೆ ಪೋಲಿಸ್ ಚೌಕಿ ಹತ್ತಿರ ವಿಶೇಷ ಕೌಂಟರ್ ತೆರೆಯಲಾಗಿದೆ. ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ಅಂತಹವರ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಸಾರ್ವಜನಿಕರುಮಂಡಳಿಯೊಂದಿಗೆ ಸಹಕರಿಸಬೇಕೆಂದು ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್
Date:
