Sunday, August 2, 2026
Sunday, August 2, 2026

“ನೈಸರ್ಗಿಕ ಮತ್ತು ಸಾವಯವ ಕೃಷಿ” ಕುರಿತಾದ ಪ್ರಾದೇಶಿಕ ವಿಚಾರಸಂಕಿರಣ’ಯಶಸ್ವಿ

Date:

Regional Organic and Natural Farming Center ಪ್ರಾದೇಶಿಕ ಸಾವಯವ ಮತ್ತು ಪ್ರಾಕೃತಿಕ ಕೃಷಿ ಕೇಂದ್ರ (RCNOF), ಬೆಂಗಳೂರು, ತೋಟಗಾರಿಕೆ ಇಲಾಖೆ. ಕರ್ನಾಟಕ ಸರ್ಕಾರ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರ (COE-FPO), ಬೆಂಗಳೂರು ಇವರ ಆಶ್ರಯದಲ್ಲಿ “ನೈಸರ್ಗಿಕ ಮತ್ತು ಸಾವಯವ ಕೃಷಿ” ಕುರಿತಾದ ಪ್ರಾದೇಶಿಕ ವಿಚಾರಸಂಕಿರಣ’ವು ಮಾರ್ಚ್ 12 2026, ಗುರುವಾರದಂದು ಬೆಂಗಳೂರಿನ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರದ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ತೋಟಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀ ಗಿರೀಶ್ ಆರ್., ಭಾ.ಆ.ಸೇ ಮುಖ್ಯ ಅತಿಥಿಯಾಗಿ ಆಗಮಿಸಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರ್ನಾಟಕದಲ್ಲಿ ನೈಸರ್ಗಿಕ ಮತ್ತು ಸಾವಯವ ಕೃಷಿಯ ಮಹತ್ವವನ್ನು ವಿವರಿಸಿದರು. ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡರೆ ರೈತರ ಆದಾಯ ಹೆಚ್ಚುವ ಜೊತೆಗೆ ಮಣ್ಣಿನ ಆರೋಗ್ಯವೂ ಕಾಪಾಡಬಹುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರದ ಉಪನಿರ್ದೇಶಕರಾದ ಡಾ. ಸದಾನಂದ ಜಿ.ಕೆ. ಅವರು ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು.

ಈ ಸಂದರ್ಭದಲ್ಲಿ ತೋಟಗಾರಿಕೆ ಅಪರ ನಿರ್ದೇಶಕರಾದ ಶ್ರೀ ಪಿ.ಎಂ. ಸೊಬರದ್, ಲಾಲ್‌ಬಾಗ್, ಪ್ರಾದೇಶಿಕ ನಿರ್ದೇಶಕರಾದ ಡಾ. ವಿ.ಕೆ. ವರ್ಮಾ (RCNOF) ಹಾಗೂ ತೋಟಗಾರಿಕೆ ಜಂಟಿ ನಿರ್ದೇಶಕರಾದ ಶ್ರೀಮತಿ ಹೇಮ ಹೆಚ್.ಎನ್. ಅವರು ನೈಸರ್ಗಿಕ ಕೃಷಿಯ ಪ್ರಚಾರ ಮತ್ತು ರೈತರಿಗೆ ಇದರ ಅಗತ್ಯತೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

Regional Organic and Natural Farming Center ಈ ಕಾರ್ಯಕ್ರಮದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯನ್ನು ಯಶಸ್ವಿಯಾಗಿ ಅನುಸರಿಸುತ್ತಿರುವ ಹತ್ತು ಪ್ರಗತಿಪರ ರೈತರನ್ನು RCNOF ಮತ್ತು COE-FPO ತಂಡದ ವತಿಯಿಂದ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...