S. Madhu Bangarappa ಶಿವಮೊಗ್ಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ಮಾ.14 ಮತ್ತು 15 ರಂದು ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾ.14 ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಜಿಲ್ಲೆಯ ಹೊಳೆಹೊನ್ನೂರು ತಾಲ್ಲೂಕಿನಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ನೆರವೇರಿಸುವರು. ಬೆ 11.30 ಕ್ಕೆ ಜಿಲ್ಲೆಯ ಮಹಾನಗರಪಾಲಿಕೆ ವ್ಯಾಪ್ತಿಯ ಆಲ್ಕೋಳ ವೃತ್ತದಿಂದ ಡಿ.ವಿ.ಜಿ ವೃತ್ತದವರೆಗೆ 100 ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಬಂಗಾರಪ್ಪ ರಸ್ತೆ ಎಂಬ ನಾಮ ಫಲಕ ಉದ್ಘಾಟನೆ ಮತ್ತು ಗೋಪಾಲಗೌಡ ಬಡಾವಣೆಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 290 ಮನೆಗಳಿಗೆ ಹಕ್ಕುಪತ್ರ ವಿತರಣೆ ಮತ್ತು ಆಶ್ರಯ ಯೋಜನೆ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮನೆಗಳ ಕೀ ಹಸ್ತಾಂತರ ಕಾರ್ಯಕ್ರಮ ಕೈಗೊಂಡು ಮಧ್ಯಾಹ್ನ 1.30 ಕ್ಕೆ ಬೊಮ್ಮನಕಟ್ಟೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ ಮಾಡಲಿದ್ದಾರೆ ಮತ್ತು ಸಂಜೆ 4.00 ಗಂಟೆಗೆ ಸುವರ್ಣ ಸಂಸ್ಕೃತಿ ಭವನ ಆವರಣ, ರಂಗಾಯಣ ಇಲ್ಲಿ ನೂತನವಾಗಿ ನಿರ್ಮಾಣವಾಗಿರುವ ‘ಪಿ.ಲಂಕೇಶ್’ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಸಂಜೆ 5.00 ಗಂಟೆಗೆ ಚಾಲುಕ್ಯನಗರದ ಸಾಹಿತ್ಯಗ್ರಾಮದಲ್ಲಿ ಜಿಲ್ಲೆಯ ಇಪ್ಪತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಮಾರ್ಚ್15 ರ ಭಾನುವಾರದಂದು ಬೆಳಗ್ಗೆ 9.30 ಕ್ಕೆ ಸೊರಬ ತಾಲ್ಲೂಕಿನ ಆನವಟ್ಟಿ ಇಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ನೆರವೇರಿಸುವರು. ಬೆಳಿಗ್ಗೆ 10.30 ಕ್ಕೆ ಸೊರಬ ತಾಲ್ಲೂಕಿನ ಚಿತ್ರಟ್ಟೆಹಳ್ಳಿಯಲ್ಲಿ ಕರ್ನಾಟಕ ರಾಜ್ಯ ಖನಿಜಗಳ ನಿಯಮಿತದ ಸಿ.ಎಸ್.ಆರ್ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಗ್ರಾಮೀಣ ಬಸ್ ನಿಲ್ದಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
S. Madhu Bangarappa ಬೆಳಿಗ್ಗೆ 11.00 ಕ್ಕೆ ಸೊರಬದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಕಟ್ಟಡ ಗುದ್ದಲಿ ಪೂಜೆ ಹಾಗೂ ಅಕ್ಷರದಾಸೋಹ ನಿವೃತ್ತ ಅಡುಗೆ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮ ಸಮಾರಂಭ ಹಾಗೂ 2025-26ನೇ ಸಾಲಿನ ಮೀನುಗಾರಿಕೆ ಇಲಾಖೆಯ 30 ಫಲಾನುಭವಿಗಳಿಗೆ ಮೀನುಗಾರಿಕೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 12 ಗಂಟೆಗೆ ಶಿಕಾರಿಪುರದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
