Sunday, March 15, 2026
Sunday, March 15, 2026

Madhu Bangarappa ಡಾ.ಅಂಬೇಡ್ಕರ್ ವಿದ್ಯಾರ್ಥಿ ನಿಲಯವು ಸಾವಿರಾರು ಬಾಲಕಿಯರ ಶಿಕ್ಷಣಕ್ಕೆ ಭದ್ರ ಆಸರೆ- ಮಧು ಬಂಗಾರಪ್ಪ

Date:

Madhu Bangarappa ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ “ಬೊಮ್ಮನಕಟ್ಟೆ ಹಾಗೂ ಊರುಗಡೂರು” ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ “ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ” ಕಟ್ಟಡವನ್ನು ಸನ್ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು ಉದ್ಘಾಟಿಸಿ, ಮಾತನಾಡಿದರು.

ಶಿಕ್ಷಣವು ಕೇವಲ ಅಕ್ಷರ ಜ್ಞಾನವಲ್ಲ, ಅದು ಬದುಕಿನ ದಾರಿ. ನಮ್ಮ ಗ್ರಾಮೀಣ ಭಾಗದ ಪ್ರತಿಭಾವಂತ ಹೆಣ್ಣುಮಕ್ಕಳು ಮೆಟ್ರಿಕ್ ನಂತರ ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶಗಳಿಗೆ ಬಂದಾಗ, ಅವರಿಗೆ ಎದುರಾಗುವ ಮೊದಲ ಸವಾಲೇ ಸುರಕ್ಷಿತ ವಸತಿ. ಆ ಕೊರತೆಯನ್ನು ನೀಗಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಇಂದು ಉದ್ಘಾಟನೆಗೊಂಡಿರುವ ಈ ವಿದ್ಯಾರ್ಥಿ ನಿಲಯವು ಕೇವಲ ಒಂದು ಕಟ್ಟಡವಾಗಿರದೇ ಇದು ಸಾವಿರಾರು ಬಾಲಕಿಯರ ಶೈಕ್ಷಣಿಕ ಕನಸುಗಳಿಗೆ ಭದ್ರವಾದ ಆಸರೆ ಕಲ್ಪಿಸಲಿದೆ. ಈ ಸುಸಜ್ಜಿತ ಮತ್ತು ಸುರಕ್ಷಿತವಾದ ಈ ಪರಿಸರದಲ್ಲಿ ನಮ್ಮ ವಿದ್ಯಾರ್ಥಿನಿಯರು ಯಾವುದೇ ಆತಂಕವಿಲ್ಲದೆ ವಿದ್ಯಾಭ್ಯಾಸ ಮಾಡಿ, ನಾಡಿನ ಹೆಮ್ಮೆಯ ಪ್ರಜೆಗಳಾಗಿ ಹೊರಹೊಮ್ಮಲಿ ಎನ್ನುವುದೇ ನನ್ನ ಆಶಯವಾಗಿದೆ ಎಂದು ತಿಳಿಸಿದರು.

Madhu Bangarappa ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್‌ ಬಾನು, ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಗೌಡ, ಶ್ರೀಮತಿ ಜಿ.ಪಲ್ಲವಿ, ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಸಿಇಓ ಶ್ರೀ ಹೇಮಂತ್ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ವಿದ್ಯಾರ್ಥಿಗಳಲ್ಲಿನ ವೈಜ್ಞಾನಿಕ- ಶೈಕ್ಷಣಿಕ ಪ್ರತಿಭೆ ಅನಾವರಣಕ್ಕೆ” ಡಿಜಿಟಲ್ ಸ್ಟುಡಿಯೊ” ಆರಂಭಿಸುವ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ವಿದ್ಯಾರ್ಥಿಗಳಲ್ಲಿನ ವೈಜ್ಞಾನಿಕ- ಶೈಕ್ಷಣಿಕ ಪ್ರತಿಭೆ ಅನಾವರಣಗೊಳಿಸಲು ವೇದಿಕೆಯನ್ನು ಒದಗಿಸುವ...

Priyank Kharge ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಿಸಲು ಮುಂಜಾಗ್ರತಾ ಕ್ರಮ- ಪ್ರಿಯಾಂಕ್ ಖರ್ಗೆ.

Priyank Kharge ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ...