Tuesday, August 25, 2026
Tuesday, August 25, 2026

Breaking News ಮೃಗಾಲಯದಲ್ಲಿ ನೀರಾನೆ ದಾಳಿಗೆ ಡಾ.ಸಮೀಕ್ಷಾ ರೆಡ್ಡಿ‌ ಬಲಿ. ಶಾಸಕ ಚೆನ್ನಿ ಸಂತಾಪ.

Date:

Breaking News ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಕರ್ತವ್ಯನಿರತರಾಗಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ನೀರಾನೆ ದಾಳಿಯಿಂದ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವುಂಟಾಗಿದೆ. ಅಸ್ವಸ್ಥ ಪ್ರಾಣಿಗೆ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಸಂಭವಿಸಿದ ಈ ದುರ್ಘಟನೆ ನಿಜಕ್ಕೂ ಅತ್ಯಂತ ಹೃದಯವಿದ್ರಾವಕವಾಗಿದೆ ಎಂದು ಶಿವಮೊಗ್ಗ ಶಾಸಕ
ರಾದ ಎಸ್.ಎನ್. ಚೆನ್ನಬಸಪ್ಪನವರು ಸಂತಾಪ ಸೂಚಿಸಿದ್ದಾರೆ.

Breaking News ವನ್ಯಜೀವಿಗಳ ಸೇವೆಯಲ್ಲಿ ತೊಡಗಿದ್ದ ಒಬ್ಬ ಪ್ರತಿಭಾವಂತ ಯುವ ವೈದ್ಯೆಯನ್ನು ನಾವು ಕಳೆದುಕೊಂಡಿರುವುದು ಜಿಲ್ಲೆಗೆ ಮತ್ತು ಪಶುವೈದ್ಯಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ರಾಜ್ಯ ಸರ್ಕಾರವು ಮೃತರ ಕುಟುಂಬಕ್ಕೆ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು. ಈ ಘಟನೆಯಲ್ಲಿ ಸುರಕ್ಷತಾ ಲೋಪಗಳಿವೆಯೇ ಎಂಬುದರ ಬಗ್ಗೆ ಸಂಬಂಧಪಟ್ಟ ಇಲಾಖೆಯಿಂದ ಕೂಲಂಕುಷ ತನಿಖೆಯಾಗಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...