Saturday, May 9, 2026
Saturday, May 9, 2026

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

Date:

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ ಲಕ್ಷಾಂತರ ರೈತಾಪಿ ಕುಟುಂಬಗಳ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಸಚಿವರಾದ ಚೆಲುವರಾಯಸ್ವಾಮಿಯವರು ತಿಳಿಸಿದ್ದಾರೆ.

ಕಳೆದ ವರ್ಷ ಕೃಷಿ ಇಲಾಖೆಯ ಸುಮಾರು 945 ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಯನ್ನು KPSC ಮೂಲಕ ನಡೆಸಲು ಆದೇಶಿಸಲಾಗಿತ್ತು.

ಆದರೆ, ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಇರಬೇಕು ಮತ್ತು ಶೀಘ್ರವಾಗಿ ನೇಮಕಾತಿ ನಡೆಯಬೇಕು ಎಂಬುದು ರಾಜ್ಯದ ಸಾವಿರಾರು ಅಭ್ಯರ್ಥಿಗಳ ಮನವಿ ಹಾಗೂ ಒತ್ತಾಯವಾಗಿತ್ತು.

ಈ ನ್ಯಾಯಯುತ ಬೇಡಿಕೆಯನ್ನು ಪರಿಗಣಿಸಿ, KPSC ಮೂಲಕ ನೇಮಕಾತಿ ನಡೆಸುವ ಹಳೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಂದು ರದ್ದುಗೊಳಿಸಿದ್ದೇವೆ ಎಂದಿದ್ದಾರೆ.

N. Chaluvaraya Swamy ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇನ್ನು ಮುಂದೆ KEA ಮೂಲಕವೇ ನಡೆಸಲು ಅಧಿಕೃತವಾಗಿ ಆದೇಶ ಹೊರಡಿಸಿದ್ದೇವೆ ಎಂದಿದ್ದಾರೆ.

ಪಾರದರ್ಶಕತೆ ಮತ್ತು ಅರ್ಹತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ಗ್ರಾಮೀಣ ಭಾಗದ, ಕೃಷಿ ಕುಟುಂಬದ ಹಿನ್ನೆಲೆಯುಳ್ಳ ಪ್ರತಿಭಾವಂತ ಯುವಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...