Friday, July 10, 2026
Friday, July 10, 2026

B.Y. Raghavendra ಯೋಜನೆಗಳು-ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು : ಬಿ.ವೈ.ರಾಘವೇಂದ್ರ

Date:

B.Y. Raghavendra ಪ್ರತಿಯೊಬ್ಬ ನಾಗರೀಕರಿಗೆ ಆರ್ಥಿಕ ಸಬಲೀಕರಣ ನೀಡಬೇಕೆಂಬ ಉದ್ದೇಶದಿಂದ ಅನುಷ್ಟಾನಗೊಳಿಸಲಾಗಿರುವ ಯೋಜನೆಗಳನ್ನು ಹಾಗೂ ಬ್ಯಾಂಕಿಂಗ್ ಸೇವೆಗಳನ್ನು ಸರಳಗೊಳಿಸಿ ಜನಸಾಮಾನ್ಯರಿಗೆ ತಲುಪಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬ್ಯಾಂಕುಗಳ ಮೂಲಕ ಸರ್ಕಾರದ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು ಬ್ಯಾಂಕ್‌ಗಳ ಸೇವೆ ಸ್ಮರಣೀಯವಾಗಿರುತ್ತದೆ. ಸರ್ಕಾರದ ಪ್ರತಿಯೊಂದು ಸೌಲಭ್ಯವು ಜಿಲ್ಲೆಯ ಕಟ್ಟಕಡೆಯ ವ್ಯಕ್ತಿಗೂ ತಲುಪುಂತಾಗಬೇಕು. ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ನಿಲುಕುವಂತೆ ಸರಳಗೊಳಿಸಿ ನೀಡಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದ ಅವರು ಪಿಎಂ ಕಿಸಾನ್, ಪಿಎಂ ಮುದ್ರಾ, ಪಿಎಂ ಸ್ವನಿಧಿ, ಎಸ್‌ಸಿ/ಎಸ್‌ಟಿ, ಮಹಿಳೆ ಮತ್ತು ಅಲ್ಪಸಂಖ್ಯಾತರಿಗಾಗಿ ಇರುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಪಿಎಂ ವಿಶ್ವಕರ್ಮ ಯೋಜನೆಯಡಿ ಬ್ಯಾಂಕುಗಳಲ್ಲಿ ಸುಮಾರು ಅರ್ಧದಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಯಾವ ಕಾರಣಕ್ಕೆ ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಬ್ಯಾಂಕ್ ಅಧಿಕಾರಿಗಳು ಮತ್ತೊಮ್ಮೆ ಪರಿಶೀಲಿಸಿ, ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸಾಲ, ಶಿಕ್ಷಣ ಸಾಲ, ವಸತಿ ಯೋಜನೆಯಡಿ ಸಾಲ ವಿತರಣೆಗೆ ಆದ್ಯತೆ ನೀಡಬೇಕು ಎಂದರು.

ಬ್ಯಾಂಕ್‌ಗಳ ಅಧಿಕಾರಿಗಳು ಸಭೆಗೆ ಹಾಜರಾಗಿ ಮಾಹಿತಿ ನೀಡಬೇಕು. 260 ಬ್ರಾಂಚ್‌ಗಳಲ್ಲಿ ಮಾತ್ರ ಡಿಎಲ್‌ಸಿಸಿ ಸಭೆ ಆಗಿದೆ. 85 ಬ್ರಾಂಚ್‌ಗಳಲ್ಲಿ ಆಗಿಲ್ಲ. ನಿಯಮಿತವಾಗಿ ಸಭೆಗಳನ್ನು ಕೈಗೊಂಡು ಕ್ರಮ ವಹಿಸಬೇಕೆಂದು ಇದೇ ವೇಳೆ ತಿಳಿಸಿದರು.

ಮಾ.24 ರಿಂದ 26 ರವರೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಪಿಎಂ ವಿಶ್ವಕರ್ಮ ವಸ್ತು ಪ್ರದರ್ಶನ ಮತ್ತು ವ್ಯಾಪಾರ ಮೇಳ ಏರ್ಪಡಿಸಲಾಗಿದ್ದು ಇಲ್ಲಿ ಒಟ್ಟು 50 ಮಳಿಗೆಗಳನ್ನು ತೆರೆಯಲಾಗುತ್ತಿದೆ.

ಫಲಾನುಭವಿಗಳು ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಹಾಗೂ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲಾ ಬ್ಯಾಂಕುಗಳು ಕೈಜೋಡಿಸಬೇಕೆಂದು ಎಂದು ಮನವಿ ಮಾಡಿದರು.

ಕೆನರಾ ಬ್ಯಾಂಕ್ ಡಿಜಿಎಂ ಮತ್ತು ಪ್ರಾದೇಶಿಕ ಮುಖ್ಯಸ್ಥರಾದ ದೇವರಾಜ್ ಆರ್ ಮಾತನಾಡಿ, 2025 ರ ಡಿಸೆಂಬರ್ ಅಂತ್ಯಕ್ಕೆ ಕೃಷಿ ಕ್ಷೇತ್ರದಲ್ಲಿ ಶೇ.74.26 ಪ್ರಗತಿ ಸಾಧನೆ ಮಾಡಿದ್ದು 2024 ನೇ ಸಾಲಿಗಿಂತ ಶೇ.31.26 ಪ್ರಗತಿ ಸಾಧಿಸಲಾಗಿದೆ. ಎಂಎಸ್‌ಎಂಇ ವಲಯದಲ್ಲಿ ಶೇ.80.03 ಪ್ರಗತಿ ಸಾಧಿಸಿದ್ದು 2024 ನೇ ಸಾಲಿಗಿಂತ ಶೇ.11.49 ಹೆಚ್ಚು ಪ್ರಗತಿ ಸಾಧಿಸಲಾಗಿದೆ.
ವಸತಿ ಸಾಲ ವಿತರಣೆ ಪ್ರಗತಿ ಕಡಿಮೆಯಾಗಿದ್ದು, ಆದ್ಯತೆ ಮೇಲೆ ಸಾಲ ವಿತರಣೆಗೆ ಬ್ಯಾಂಕುಗಳು ಕ್ರಮ ವಹಿಸಬೇಕು. ಪಿಎಂ ವಿಶ್ವಕರ್ಮ ಯೋಜನೆಯಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ, ಮಂಜೂರು ಮಾಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಜಿ.ಪಂ ಸಿಇಓ ಹೇಮಂತ್ ಎನ್ ಮಾತನಾಡಿ, ಬ್ಯಾಂಕುಗಳು ಪ್ರಧಾನಮಂತ್ರಿ ವಿಶ್ವಕರ್ಮ, ಮುದ್ರಾ ಸೇರಿದಂತೆ ಪಿಎಂ ಸಾಲ/ಸೌಲಭ್ಯ ನೀಡುವ ಯೋಜನೆಗಳಡಿ ಬಂದಂತಹ ಅರ್ಜಿಗಳನ್ನು ಸಮರ್ಪಕವಾಗಿ ಪರಿಶೀಲಿಸಿ ಮಂಜೂರು ಮಾಡಬೇಕು. ಪಿ.ಎಂ. ವಿಶ್ವಕರ್ಮ ಯೋಜನೆಯಡಿ 10994 ಅರ್ಜಿಗಳು ಸ್ವೀಕೃತವಾಗಿದ್ದು 5169 ಅರ್ಜಿಗಳು ಮಂಜೂರಾಗಿವೆ. ಶೇ.50 ರಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಸಮರ್ಪಕವಾದ ಕಾರಣಗಳನ್ನು ಒದಗಿಸುವ ವರದಿಯನ್ನು ಬ್ಯಾಂಕುವಾರು ನೀಡಬೇಕು. ವಿವಿಧ ಯೋಜನೆಯಡಿ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ, ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

B.Y. Raghavendra ಪಿ ಎಂ ಸ್ವನಿಧಿ ಯೋಜನೆಯಡಿ ಮೊದಲನೇ ಹಂತದ ಸಾಲ ವಿತರಣೆ ಪ್ರಗತಿ ಚೆನ್ನಾಗಿದೆ. 2 ಮತ್ತು ಮೂರನೇ ಭಾಗದ ಸಾಲ ಪ್ರಗತಿ ಮತ್ತು ಪ್ರಕ್ರಿಯೆ ನಿಧಾನವಾಗಿದೆ. ಇದನ್ನು ಚುರುಕುಗೊಳಿಸಿ, ಪ್ರಗತಿ ಸಾಧಿಸಬೇಕು ಎಂದು ಸೂಚನೆ ನೀಡಿದರು.
ಎಲ್ಲ ಬ್ಯಾಂಕುಗಳು ಕಿಸಾನ್ ಕ್ರೆಡಿಟ್ ಕಾಡ್‌ಗಳನ್ನು ಸಮರ್ಪಕವಾಗಿ ನಿಗದಿತ ಗುರಿಯನ್ವಯ ವಿತರಣೆ ಮಾಡಬೇಕು. ಪ್ರಗತಿ ಸಾಧಿಸದ, ಹಾಗೂ ಕಡಿಮೆ ಪ್ರಗತಿ ಮಾಡಿರುವ ಬ್ಯಾಂಕುಗಳು ಈ ಕುರಿತು ಕೂಡಲೇ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದರು.

ಹಣಕಾಸು ಸಾಕ್ಷರತಾ ಕೇಂದ್ರ(ಎಫ್‌ಎಲ್‌ಸಿ)ಗಳು ಹಾಗೂ ಸೆಂಟರ್ ಫಾರ್ ಫೈನಾನ್ಶಿಯಲ್ ಲಿಟರಸಿಗಳು ಪರಿಣಾಮಕಾರಿಯಾಗಿ ಆಯ್ದ ಸ್ಥಳಗಳಲ್ಲಿ ಶಿಬಿರಗಳನ್ನು, ಸಭೆಗಳನ್ನು ನಡೆಸಿ ಬ್ಯಾಂಕ್ ಖಾತೆ ತೆರೆಯುವುದು, ವಿವಿಧ ಯೋಜನೆಗಳು ಸೇರಿದಂತೆ ಹಣಕಾಸು ವಿಷಯದಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.
ಪಿಎಂ ಫಾರ್ಮಲೈಸೇಷನ್ ಆಫ್ ಮೈಕ್ರೊ ಫುಡ್ ಪ್ರಾಸೆಸಿಂಗ್ ಎಂಟರ್‌ಪ್ರೈಸಸ್ ಯೋಜನೆಯಡಿ ಶಿವಮೊಗ್ಗಕ್ಕೆ 200 ಗುರಿ ನೀಡಲಾಗಿದ್ದು 114 ಸಾಧನೆ ಸಾಧಿಸಿದ್ದು, ಬಾಕಿ ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ತಿಳಿಸಿದರು.

ಪಿಎಂಜೆಜೆಬಿವೈ, ಪಿಎಂಎಸ್‌ಬಿವೈ, ಕೆವಿಐಬಿ ಪ್ರಾಯೋಜಿತ ಪಿಎಂಇಜಿಪಿ ಯೋಜನೆಗಳಡಿ ಗುರಿಯನ್ವಯ ಸಾಧನೆ ಮಾಡಬೇಕು. ಪಿಎಂ ಯೋಜನೆಗಳು/ಕಾರ್ಯಕ್ರಮಗಳ ಪ್ರಗತಿಯಲ್ಲಿ ಹಿಂದೆ ಇರುವ ಬ್ಯಾಂಕುಗಳು ಸೂಕ್ತ ಕ್ರಮ ಕೈಗೊಂಡು ನಿಗದಿತ ಪ್ರಗತಿಯನ್ನು ಸಾಧಿಸಬೇಕು. ಯಾವುದೇ ಸಾಲ/ಸೌಲಭ್ಯ/ಅರಿವು ನೀಡುವ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿ.ಪಂ ಸಹಕಾರ ಎಂದಿಗೂ ಇದೆ. ಆಶಾ, ಅಂಗನವಾಡಿ ಸಹಾಯಕರು, ಪಂಚಾಯಿತಿ ಸಹಾಯಕರ ಸಹಾಯವನ್ನು ಸಹ ಪಡೆಯಬಹುದು ಎಂದರು.

ಸಭೆಯಲ್ಲಿ ಪಿಎಂಇಜಿಪಿ, ಪಿಎಂ ಸೂರ್ಯ ಘರ್ ಪಿಎಂ ಎಫ್‌ಎಂಇ ಯೋಜನೆಯಡಿ 15 ಫಲಾನುಭವಿಗಳಿಗೆ ಶಾಮಿಯಾನ, ರೋಟಿ ಮೇಕರ್, ಶಿಕ್ಷಣಕ್ಕೆ ಸಂಬಂಧಿಸಿದ ಸಾಲದ ಚೆಕ್‌ನ್ನು ವಿತರಿಸಲಾಯಿತು.

ಸಭೆಯಲ್ಲಿ ಆರ್‌ಬಿಐ ಲೀಡ್ ಜಿಲ್ಲಾ ಅಧಿಕಾರಿ ಸೂರಜ್ ಎಸ್, ನಬಾರ್ಡ್ ಜಿಲ್ಲಾ ಅಭಿವೃದ್ದಿ ಪ್ರಬಂಧಕ ಶರತ್ ಗೌಡ, ಲೀಡ್ ಬ್ಯಾಂಕ್ ಮ್ಯಾನೇಜರ್ ಹನುಮಂತಪ್ಪ ಪಿ, ವಿವಿಧ ಬ್ಯಾಂಕುಗಳ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...