Tuesday, March 24, 2026
Tuesday, March 24, 2026

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Date:

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ ಕೇಂದ್ರ ಹಾಗೂ ನಮ್ಮ ಹಳ್ಳಿ ಥಿಯೇಟರ್(ರಿ) ರವರ ಸಹಯೋಗದೊಂದಿಗೆ 6 ರಿಂದ 9 ನೇ ತರಗತಿಯ ಸರ್ಕಾರಿ ಶಾಲೆ ಮಕ್ಕಳಿಗಾಗಿ “ಮನಃಸ್ಫೂರ್ತಿ ಶಿಬಿರ – 2026” ಅನ್ನು ಆಯೋಜಿಸಲಾಗಿದ್ದು, ಈ ಶಿಬಿರವು ದಿನಾಂಕ : 13/04/2026 ರಿಂದ 25/04/2026 ರವರೆಗೆ ಪ್ರತಿ ದಿನ ಬೆಳಿಗ್ಗೆ 9:30 ರಿಂದ ಸಂಜೆ 4:00 ರವರೆಗೆ ಇರುತ್ತದೆ.

ಶಿಬಿರದಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಮೌಲ್ಯಯುತ ಶಿಕ್ಷಣ, ಸಾಂಸ್ಕೃತಿಕ ಕಾರ್ಯಕ್ರಮಗಳು, ಹಾಡುಗಾರಿಕೆ, ಹಾಸ್ಯ ಕಥೆ, ನಾಟಕ, ಚಿತ್ರಕಲೆ, ನೃತ್ಯ, ಜಾದು, ಮೇಕಪ್, ಯೋಗ, ಧ್ಯಾನ, ಅರಿವು, ಸಿನಿಮಾ ವೀಕ್ಷಣೆ, ಕ್ಲೇ ಮಾಡೆಲ್, ಪ್ರವಾಸ, ತೊಗಲು ಗೊಂಬೆ, ಯಕ್ಷಗಾನ, ಓರಿಗಾಮಿ, ಚಿತ್ರಕಲೆ, ಮೂಕಾಭಿನಯ, ಆರೋಗ್ಯ, ಸಾಮಾನ್ಯ ಜ್ಞಾನ ಮತ್ತು ಮಕ್ಕಳ ಹಕ್ಕುಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು. ಶಿಬಿರವು ಸಂಪೂರ್ಣವಾಗಿ ಉಚಿತವಾಗಿದ್ದು, 6 ರಿಂದ 9 ನೇ ತರಗತಿಯ 60 ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಅವಕಾಶವಿರುತ್ತದೆ. Manasadhara Trust ಆಸಕ್ತ ಮಕ್ಕಳ ಪೋಷಕರು ಏಪ್ರಿಲ್ 4 ರೊಳಗೆ ಶಿವಮೊಗ್ಗದ ಜೆ ಪಿ ಎನ್ ರಸ್ತೆಯ ಮಾನಸ ನರ್ಸಿಂಗ್ ಹೋಂ ಬಳಿಯ ಮನಃಸ್ಫೂರ್ತಿ ಕಲಿಕಾ ಕೇಂದ್ರದಲ್ಲಿ ಹೆಸರು ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮನಃಸ್ಫೂರ್ತಿ ಕಛೇರಿ 8867540973 / ಶಿಬಿರದ ಸಂಚಾಲಕರಾದ ಶ್ರೀ ಯುತ ಮಂಜುನಾಥ್ ಸ್ವಾಮಿ 9845014229 / ಶ್ರೀಮತಿ ರಂಗನಾಯಕಿ 9663645373 ಇವರನ್ನು ಸಂಪರ್ಕಿಸಬೇಕಾಗಿ ಮನಃಸ್ಫೂರ್ತಿಯ ಶೈಕ್ಷಣಿಕ ನಿರ್ದೇಶಕರಾದ ಡಾ.ಪ್ರೀತಿ.ವಿ.ಶಾನ್ ಭಾಗ್ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

India Scouts and Guides ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ

India Scouts and Guides ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು...