ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ಶಿವಮೊಗ್ಗದ ವತಿಯಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿರುವ ಶಿವಮೊಗ್ಗ ಜಿಲ್ಲಾ 7ನೇ ಶರಣ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿದ್ದರು.
ಮಾರ್ಚ್ 24 ಮತ್ತು 25ರಂದು ನಡೆಯುವ ಈ ಸಮ್ಮೇಳನವು “ನನ್ನ ನಡೆ – ವಚನದಡೆ” ಎಂಬ ಆಶಯದೊಂದಿಗೆ ಶರಣರ ವಿಚಾರಧಾರೆಗಳನ್ನು ಜನಮಾನಸಕ್ಕೆ ತಲುಪಿಸುತ್ತಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯ ಮತ್ತು ನೇತ್ರತ್ವವನ್ನು ವಹಿಸಿದ್ದ ಪರಮಪೂಜ್ಯ ಜಗದ್ಗುರುಗಳು, ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು, ಶ್ರೀಮತ್ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠ, ಸುತ್ತೂರು, ಸಮ್ಮೇಳನಾಧ್ಯಕ್ಷರು, ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರು, ಶ್ರೀ ಮುರುಘಾಮಠ, ಆನಂದಪುರಂ, ಮತ್ತು ಶ್ರೀ ಬೆಕ್ಕಿನಕಲ್ಮಠ, ಶಿವಮೊಗ್ಗ, ಪೂಜ್ಯರ ದಿವ್ಯ ಆಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ಜರುಗಿತು.
ವಚನ ಸಾಹಿತ್ಯವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಶಕ್ತಿಯನ್ನು ಹೊಂದಿದೆ. ಇಂತಹ ಸಾಹಿತ್ಯ ಸಮ್ಮೇಳನಗಳು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಸೇತುವೆಯಾಗಲಿ ಎಂದು ಆಶಿಸಿದ್ದಾರೆ.
