Wednesday, March 25, 2026
Wednesday, March 25, 2026

Yogoda Satsanga Society of India ಧಾರವಾಡದಲ್ಲಿ ಮಾ.25 ರಿಂದ ಪರಮಹಂಸ ಯೋಗಾನಂದರ ಯೋಗ ಬೋಧನೆ ಕುರಿತ ಉಪನ್ಯಾಸ ಮಾಲಿಕೆ -ಸ್ವಾಮಿ ಸ್ಮರಣಾನಂದ ಗಿರಿ.

Date:

Yogoda Satsanga Society of India ಪರಮಹಂಸ ಯೋಗಾನಂದರ ಕ್ರಿಯಾ ಯೋಗದ ಬೋಧನೆಗಳ ಆಧಾರಿತ ಉಪನ್ಯಾಸ ಕಾರ್ಯಕ್ರಮ ದಿ. 25ರಂದು ಸಂಜೆ 6ರಿಂದ 7.15ರ ವರೆಗೆ ನಗರದ ಹೋಟೆಲ್ ಗ್ರ್ಯಾಂಡ್‌ ಮಾಸ್ಟಿವ್‌ನಲ್ಲಿ ನಡೆಯಲಿದೆ ಎಂದು ಯೋಗದ ಸತ್ಸಂಗ ಸೊಸೈಟಿ ಉಪಾಧ್ಯಕ್ಷ ಸ್ವಾಮಿ ಸ್ಮರಣಾನಂದ ಗಿರಿಯವರ ಹೇಳಿದರು.

ಧಾರವಾಡ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪರಮಹಂಸ ಯೋಗಾನಂದರ ಉಪದೇಶಗಳು ಹಾಗೂ ವೈಜ್ಞಾನಿಕ ಧ್ಯಾನದ ಆಧ್ಯಾತ್ಮಿಕ ಮಹತ್ವದ ಕುರಿತ ಉಪನ್ಯಾಸದ ನಂತರ, ಆಸಕ್ತರಿಗೆ ಅದೇ ವೈಜ್ಞಾನಿಕ ಧ್ಯಾನದ ಕೆಲವು ಮೂಲಭೂತ ತಂತ್ರಗಳನ್ನು ಬೋಧಿಸಲಾಗುವುದು ಎಂದರು.

1917ರಲ್ಲಿ ಆಧ್ಯಾತ್ಮಿಕ ಮಹಾಗುರು ಪರಮಹಂಸ ಯೋಗಾನಂದರು ಸ್ಥಾಪಿಸಿದ ಸಂಸ್ಥೆ-ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಶೀಘ್ರದಲ್ಲೇ ಯೋಗದಾ ಸತ್ಸಂಗ ಕ್ರಿಯಾ ಯೋಗ ಪಾಠಗಳನ್ನು ಕನ್ನಡದಲ್ಲಿ ಪರಿಚಯಿಸಲಿದೆ. ಇದರಿಂದ ಪ್ರಾಚೀನ ಮತ್ತು ವೈಜ್ಞಾನಿಕ ಕ್ರಿಯಾ ಯೋಗ ಧ್ಯಾನ ಉಪದೇಶಗಳು ಮತ್ತು ಯೋಗದ ಸರ್ವಮಾನವೀಯ ತತ್ವಗಳು ಕನ್ನಡಭಾಷಿಕ ಆತ್ಮಸಾಧಕರಿಗೆ ಅವರ ಮಾತೃಭಾಷೆಯಲ್ಲಿ ಲಭ್ಯವಾಗಲಿವೆ ಎಂದರು.

ಈ ಪಾಠಗಳು ಈಗಾಗಲೇ ಇಂಗ್ಲಿಷ್, ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಲಭ್ಯವಿದ್ದು, ಅವುಗಳ ಮೂಲಕ ಸಾವಿರಾರು ಆತ್ಮಸಾಧಕರು ಆಂತರಿಕ ಪರಿವರ್ತನೆ ಅನುಭವಿಸುತ್ತಿದ್ದಾರೆ. ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಯೋಗದಾ ಸತ್ಸಂಗ ಸೊಸೈಟಿ ಶಾಂತಿ, ಆಂತರಿಕ ಭದ್ರತೆ ಮತ್ತು ಶಾಶ್ವತ ಸಂತೋಷ ಹುಡುಕುವ ಜನರಿಗೆ ಭಾರತದ ಅಮೂಲ್ಯ ಆಧ್ಯಾತ್ಮಿಕ ಜ್ಞಾನ ಹಂಚಿಕೊಂಡಿದೆ ಎಂದರು.
ಪರಮಹಂಸ ಯೋಗಾನಂದರು ಬೋಧಿಸಿದ ಧ್ಯಾನದ ವೈಜ್ಞಾನಿಕ ವಿಧಾನಗಳು ಮತ್ತು ಸಮತೋಲನಯುತ ಜೀವನದ ತತ್ವಗಳ ಮೂಲಕ, ಪ್ರಾಮಾಣಿಕ ಸಾಧಕರು ಕ್ರಮಬದ್ಧವಾಗಿ ಮತ್ತು ಹಂತ ಹಂತವಾಗಿ ಕ್ರಿಯಾ ಯೋಗ ಧ್ಯಾನದ ತಂತ್ರಗಳನ್ನು, ಮನೆ ಮೂಲಕ ಅಧ್ಯಯನದ ಪತ್ರಾಚಾರ ಪಾಠಕ್ರಮವಾಗಿ ಕಲಿಯಬಹುದು ಮತ್ತು ತಮ್ಮ ದೈನಂದಿನ ಕರ್ತವ್ಯಗಳನ್ನು ಮುಂದುವರಿಸಿಕೊಂಡೇ ಈ ಉಪದೇಶಗಳನ್ನು ಅಭ್ಯಾಸ ಮಾಡಬಹುದು ಎಂದು ತಿಳಿಸಿದರು.

Yogoda Satsanga Society of India ಪರಮಹಂಸ ಯೋಗಾನಂದರ ಉಪದೇಶಗಳು ಮತ್ತು ಕ್ರಿಯಾ ಯೋಗ ಧ್ಯಾನದ ವೈಜ್ಞಾನಿಕ ವಿಧಾನವನ್ನು ಅನುಸರಿಸುವ ಮೂಲಕ ಪ್ರತಿಯೊಬ್ಬರೂ ತಮ್ಮೊಳಗಿನ ಅಂತರಂಗದ ಶಾಂತಿ ಹಾಗೂ ಅಂತರ್ನಿಹಿತ ದೈವಿಕ ಸಾನಿಧ್ಯ ಶಕ್ತಿ ಮತ್ತು ಆನಂದವನ್ನು ನೇರವಾಗಿ ಅನುಭವಿಸಬಹುದು ಎಂಬುದನ್ನು ವಿಶೇಷವಾಗಿ ವ್ಯಕ್ತಪಡಿಸುತ್ತೇವೆ ಎಂದರು.
ಸ್ವಾಮಿ ಶ್ರೇಯಾನಂದ ಗಿರಿಯವರ ಮಾತನಾಡಿ,
ಯೋಗದಾ ಸತ್ಸಂಗ ಸೊಸೈಟಿ ದೇಶದಾದ್ಯಂತ ಆನ್‌ಲೈನ್ ಧ್ಯಾನ ಕೇಂದ್ರಗಳು ಹಾಗೂ ಪ್ರತ್ಯಕ್ಷ ಧ್ಯಾನ ಕೇಂದ್ರಗಳನ್ನು ನಡೆಸುತ್ತಿದ್ದು, ಭಕ್ತರು ಸಾಮೂಹಿಕ ಧ್ಯಾನ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಇದಲ್ಲದೆ, ಈ ಸಂಸ್ಥೆ ಭಾರತದಲ್ಲಿ ಐದು ಆಶ್ರಮಗಳನ್ನು ಹೊಂದಿದ್ದು, ಅಲ್ಲಿ ಸಾಧಕರು ಧ್ಯಾನ, ಆಧ್ಯಾತ್ಮಿಕ ಸಾಧನೆ ಹಾಗೂ ಸಮತೋಲನಯುತ ಜೀವನಕ್ಕೆ ಸಂಬಂಧಿಸಿದ ಶಿಬಿರಗಳು ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶವಿದೆ ಎಂದರು.

ಯೋಗದಾ ಸತ್ಸಂಗ ಪಾಠಗಳ ಕನ್ನಡ ಆವೃತ್ತಿಯ ಪ್ರಕಟಣೆ ಹಾಗೂ ಪರಿಚಯದ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸುತ್ತಾ ಬರಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ https://yssofindia.org/lessons-programmes ಧಾರವಾಡ: 83103 89328; 96861 50110, ಬೆಂಗಳೂರು: 9448101212; 8296335455 ಸಂಪರ್ಕಿಸಬಹುದು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...