Monday, May 25, 2026
Monday, May 25, 2026

Pallavi G ನಿವೇಶನ ರಹಿತ ಅಲೆಮಾರಿ ಜನಾಂಗದವರಿಗೆ ಮೊದಲ ಆದ್ಯತೆ ನೀಡಿ- ಜಿ.ಪಲ್ಲವಿ.

Date:

Pallavi G ಶಿವಮೊಗ್ಗ ತಾಲ್ಲೂಕುಗಳಲ್ಲಿನ ಸಮಾಜ ಕಲ್ಯಾಣ ಅಧಿಕಾರಿಗಳು, ತಹಶೀಲ್ದಾರರು, ಇಓ, ಪಿಡಿಓ ಗಳು ನಿವೇಶನ ರಹಿತ ಅಲೆಮಾರಿ ಜನಾಂಗದವರಿಗೆ ನಿವೇಶನ ನೀಡುವುದಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ತಿಳಿಸಿದರು.

ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿವಮೊಗ್ಗ ತಾಲ್ಲೂಕಿನ ಗೋಂದಿಚಟ್ನಹಳ್ಳಿಯಲ್ಲಿ ನಿವೇಶನರಹಿತ ಅಲೆಮಾರಿ ಜನಾಂಗದವರು ತಮಗೆ ನಿವೇಶನ ನೀಡುವಂತೆ ನಿರಂತರವಾಗಿ ಬೇಡಿಕೆ ಇಟ್ಟರೂ, ಅದಕ್ಕೆ ಆದ್ಯತೆ ನೀಡದೇ ಬೇರೆ ಕಾರಣಗಳಿಗೆ ಭೂಮಿ ನೀಡಲು ಮುಂದಾಗಿರುವುದು ತಮ್ಮ ಗಮನಕ್ಕೆ ಬಂದಿದ್ದು, ಇಲಾಖೆ ಅಧಿಕಾರಿಗಳು, ತಹಶೀಲ್ದಾರರು, ಇಓ ಮತ್ತು ಪಿಡಿಓ ಗಳು ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ಮೊದಲು ನಿವೇಶನರಹಿತ ಅಲೆಮಾರಿಗಳಿಗೆ ನಿವೇಶನ ಗುರುತಿಸಿ ನೀಡುವುದಕ್ಕೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದ ಅವರು ನಿಗಮದಲ್ಲಿ ಸುಮಾರು 3300 ವಸತಿ ಸೌಲಭ್ಯ ಕಲ್ಪಿಸಲು ರೂ.100 ಕೋಟಿ ಅನುದಾನ ಲಭ್ಯವಿದ್ದು, ಜಿಲ್ಲೆಯಲ್ಲಿ ಈ ವಸತಿ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಹಾಗೂ ಎಲ್ಲಾ ತಾಲ್ಲೂಕುವಾರು ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿವೇಶನರಹಿತ ಅಲೆಮಾರಿ ಜನಾಂಗದವರ ಪಟ್ಟಿಯನ್ನು ಒಂದು ವಾರದೊಳಗೆ ನೀಡುವಂತೆ ಸೂಚಿಸಿದರು.
ಸಮರ್ಪಕ ಮಾಹಿತಿ ನೀಡಲು ಸೂಚನೆ : ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಲೆಮಾರಿ ಜಾತಿಗಳ ಕುರಿತು ಹಾಗೂ ತಾಲ್ಲೂಕುವಾರು ನಿವೇಶನ ರಹಿತರ ಮಾಹಿತಿಯನ್ನು ಸಮರ್ಪಕವಾಗಿ ನೀಡಿಲ್ಲ. ಅದನ್ನು ಶೀಘ್ರದಲ್ಲಿ ಸರಿಪಡಿಸಿ ನೀಡಬೇಕು ಎಂದು ತಾಕೀತು ಮಾಡಿದರು.

ವಸತಿ ಮತ್ತು ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಾದ ಮೂಲ ದಾಖಲೆಗಳಾದ, ಆಧಾರ್, ಜಾತಿ ಪ್ರಮಾಣ ಪತ್ರ, ರೇಷನ್ ಕಾರ್ಡ್ನಂತಹ ದಾಖಲೆಗಳು ಬಹಳಷ್ಟು ಅಲೆಮಾರಿ ಜನಾಂಗದವರ ಬಳಿ ಇಲ್ಲ. ಈ ಮೂಲ ದಾಖಲಾತಿಗಳನ್ನು ಒದಗಿಸಲು ತಹಶೀಲ್ದಾರರು ಸಹಕರಿಸಬೇಕು. ಸ್ಥಾನಿಕ ಚೌಕಾಸಿ ಮಾಡಿ ಜಾತಿ ಪ್ರಮಾಣ ಪತ್ರ ನಿಡಬೇಕು ಎಂದು ತಿಳಿಸಿದರು.

Pallavi G 2025-26 ನೇ ಸಾಲಿಗೆ ನಿಗಮದಿಂದ ಅಲೆಮಾರಿ ಜನಾಂಗಗಳಿಗೆ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಅವರಿಗೆ ನಿಗದಿತ ಸಮಯದೊಳಗೆ ತಲುಪಿಸಬೇಕು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ದಾಖಲಾತಿಗಳನ್ನು ಒಂದು ತಿಂಗಳಲ್ಲಿ ಸಲ್ಲಿಸದಿದ್ದಲ್ಲಿ ಅಲೆಮಾರಿ ಜನಾಂಗದ ಇತರರಿಗೆ ಅವಕಾಶ ಕೊಡಬೇಕು. ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡಿ ಸೌಲಭ್ಯ ನೀಡುವಂತೆ ಸೂಚಿಸಿದರು.

ವಸತಿ ಶಾಲೆಗಳಲ್ಲಿ ಅಲೆಮಾರಿ ಜನಾಂಗಗಳಿಗೆ ಶೇ.10 ಮೀಸಲಾತಿಯ ವಿವರ ಪಡೆದ ಅವರು ಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದರು.
ಬೊಮ್ಮನಕಟ್ಟೆ ಗ್ರಾ ಪಂ ವ್ಯಾಪ್ತಿಯ 12 ಅಲೆಮಾರಿ ಜನಾಂಗದ ಕುಟುಂಬಗಳಿಗೆ ನಿವೇಶನ ಇಲ್ಲ. ಇವರಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು. ಶಿಕಾರಿಪುರದಲ್ಲಿ ಹಂದಿಜೋಗಿ ಜನಾಂಗದ 7 ಕುಟುಂಬಗಳಿಗೆ ನಿವೇಶನ ಇಲ್ಲ. ಪುರಸಭೆಯವರು ಇವರಿಗೆ ನಿವೇಶನ ಒದಗಿಸಿ ಮಾಹಿತಿ ನೀಡಬೇಕೆಂದರು. ಹೊಸನಗರ ತಾಲ್ಲೂಕಿನ ಜೇನಿ ಗ್ರಾಮದ ಶಿಳ್ಳೇಕ್ಯಾತ ಜನಾಂಗದ 20 ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಒದಗಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗ್ಗ ತಾಲ್ಲೂಕಿನ ಕಲ್ಲಾಪುರ ಗ್ರಾಮದಲ್ಲಿ ಅಲೆಮಾರಿ ಜನಾಂಗದವರು ಅರಣ್ಯ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾರೆಂಬ ಕಾರಣಕ್ಕೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಮೂಲಭೂತ ಸೌಕರ್ಯಗಳು, ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿರುವ ಈ ಜನಾಂಗದವರು ಯಾವ ಜಾಗದಲ್ಲಿ ವಾಸಿಸುತ್ತಿದ್ದಾರೆ ಎಂದು ಖಾತ್ರಿಪಡಿಸಿಕೊಂಡು, ಮೂಲಭೂತ ಸೌಕರ್ಯಗಳು ಮತ್ತು ಸರ್ಕಾರದ ಸೌಲಭ್ಯಗಳು ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಅಲೆಮಾರಿ ಜನಾಂಗಗಳು ವಾಸಿಸುತ್ತಿರುವ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ಅವರನ್ನೆಲ್ಲ ಒಂದೆಡೆ ಸೇರಿಸಿ ಸರ್ಕಾರದ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಮಾಡಬೇಕು. ಐಇಸಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮಾಡಬೇಕು ಎಂದು ತಿಳಿಸಿದರು.

ಮಿಷನ್ ಸುರಕ್ಷಾ ಅಭಿಯಾನದಡಿ ಬಾಲ್ಯ ವಿವಾಹ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು. ಈಗಾಗಲೇ ಕೈಗೊಂಡಿರುವ ಚಟುವಟಿಕೆಗಳ ಕುರಿತು ವರದಿ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ಅಧಿಕಾರಿಗಳು ಸಭೆಗೆ ಸಮರ್ಪಕವಾದ ಮಾಹಿತಿಯನ್ನು ನೀಡಬೇಕು. ಅಲೆಮಾರಿ ಜನಾಂಗಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಇನ್ನೆರಡು ದಿನಗಳಲ್ಲಿ ತಮಗೆ ನೀಡಬೇಕು. ನಿಗದಿತ ವೇಳೆಯೊಳಗೆ ಸೌಲಭ್ಯ, ಯೋಜನೆಗಳನ್ನು ಅವರಿಗೆ ತಲುಪಿಸಬೇಕು. ಹಾಗೂ ಅಲೆಮಾರಿ ಜನಾಂಗದವರು ತಮ್ಮನ್ನು ನೇರವಾಗಿ ಭೇಟಿಯಾಗಿ ಅಹವಾಲು ನೀಡಬಹುದೆಂದು ತಿಳಿಸಿದರು.

ಸಭೆಯ ನಂತರ ನಿಗಮದ ಅಧ್ಯಕ್ಷರು ಪ.ಜಾ, ಪ.ಪಂ ಗಳ ಅಲೆಮಾರಿ ಸಮುದಾಯದ ಜನರಿಂದ ವಿವಿಧ ರೀತಿಯ ಕುಂದು ಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಮೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ನಿಗಮದ ಸದಸ್ಯರು, ನಿಗಮದ ಕೋಆರ್ಡಿನೇಟರ್ ಆನಂದಕುಮಾರ್, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಇಓ ಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...