CM Siddharamaih ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಜನ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು. ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ. ನಮ್ಮ ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು.
ನಾನು ಎಂದೂ ಸಾಲ ಮಾಡಬಾರದು ಎಂದು ಹೇಳಿಲ್ಲ. ಹೇಳುವುದೂ ಇಲ್ಲ. ಆದರೆ ಮಾಡುವ ಸಾಲ ಜನರ ಕಲ್ಯಾಣಕ್ಕಾಗಿ ಮತ್ತು ನಾಡಿನ ಅಭಿವೃದ್ಧಿಗಾಗಿ ಬಳಕೆಯಾಗಿದೆಯೇ ಎಂಬುದು ಮುಖ್ಯ.
ಎಂದು
ಬಜೆಟ್ ಕುರಿತ ಚರ್ಚೆಗೆ ವಿಧಾನ ಪರಿಷತ್ನಲ್ಲಿ ಮುಖ್ಯಮಂತ್ರಿ ಉತ್ತರಿಸಿದರು.
CM Siddharamaih 2008 ರಿಂದ 2013 ರವರೆಗೆ ಇದ್ದ ಬಿಜೆಪಿಯೂ ಸಾಲ ಮಾಡಿದೆ. ಆದರೆ, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಲ್ಲ, ಅಭಿವೃದ್ಧಿಯೂ ಶೂನ್ಯ. ಹಾಗಿದ್ರೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಲ ಮಾಡಿದ್ದು ಏಕೆ? ಎಂದು ಪ್ರತಿಪಕ್ಷಕ್ಕೆ ಮುಖ್ಯಮಂತ್ರಿಗಳು ಅಧಿವೇಶನದಲ್ಲಿ ಮಾತಿನ ಈಟಿ ತಿವಿದರು.
