Monday, March 30, 2026
Monday, March 30, 2026

ಏಪ್ರಿಲ್1. ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿನ ತಾತ್ಕಾಲಿಕ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ.

Date:

ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಅಧೀನದಲ್ಲಿರುವ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಹುದ್ದೆಗಳ ವಿವರ: ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಒಟ್ಟು 09 ಹುದ್ದೆಗಳು ಇದ್ದು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ (ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ) ಆಯ್ಕೆ ಮಾಡಲಾಗುವುದು.
ಎಂ.ಬಿ.ಬಿ.ಎಸ್ (MBBS) ಪದವೀಧರರಾಗಿರಬೇಕು.

ಜಿಲ್ಲೆಯ ಬ್ಯಾಕೋಡು, ತುಮರಿ, ಕಾರ್ಗಲ್, ತಾಳಗುಪ್ಪ, ತಡಗಳಲೆ, ಮೂಡಿದೋಡಿಕೊಪ್ಪ, ಚಂದ್ರಗುತ್ತಿ, ಬೆಟ್ಟಬಸವಾನಿ ಹಾಗೂ ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗುವುದು.

ಸಂದರ್ಶನದ ವಿವರ: ದಿನಾಂಕ: 01/04/2026 ರಂದು ಸಮಯ: ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಬಿ.ಹೆಚ್ ರಸ್ತೆ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಒಂದು ಪಕ್ಷ ಹುದ್ದೆಗಳು ಪೂರ್ಣ ಭರ್ತಿಯಾಗದಿದ್ದಲ್ಲಿ ಪ್ರತಿ ದಿನ ಇದೇ ವೇಳೆ ಮತ್ತು ಸ್ಥಳದಲ್ಲಿ ಹುದ್ದೆಗಳು ಭರ್ತಿ ಆಗುವವರೆಗೆ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ವೇಳೆ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಮತ್ತು ದಾಖಲೆಗಳ ಒಂದು ಸೆಟ್ ನಕಲು ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು.

ಹೆಚ್ಚಿನ ಮಾಹಿತಿಗಾಗಿ ನೇರವಾಗಿ ಕಚೇರಿಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 08182-222382 ಅನ್ನು ಸಂಪರ್ಕಿಸಬಹುದು ಎಂದು ಡಿಹೆಚ್ ಓ ಡಾ. ನಟರಾಜ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...