Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ ಸುರಿದ ಸಿಡಿಲು, ಗುಡುಗು ಮಳೆಗೆ ವ್ಯಕ್ತಿ ಬಲಿಯಾಗಿದ್ದಾನೆ.
ಶೇಕ್ ಮುಜೀಬ್ ಎಂಬ 45 ವರ್ಷದ ವ್ಯಕ್ತಿ ಶಿವಮೊಗ್ಗ ತಾಲೂಕಿನ ರಾಮನಗರದಲ್ಲಿ ಚಿಕನ್ ಅಂಗಡಿಯಲ್ಲಿದ್ದಾಗ ಸಿಡಿಲು ಬಡಿದಿದೆ. ಸಿಡಿಲು ಬಡಿದ ಹೊಡೆತಕ್ಕೆ ಚಿಕನ್ ಅಂಗಡಿ ಮಾಲೀಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Breaking News ಶೇಕ್ ಮುಜೀಬ್ ಹಾರನಹಳ್ಳಿ ನಿವಾಸಿಯಾಗಿದ್ದು, ರಾಮನಗರದಲ್ಲಿ ಚಿಕನ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಅಂಗಡಿ ಪಕ್ಕದಲ್ಲಿದ್ದ ಮರಕ್ಕೆ ಸಿಡಿಲು ಬಡಿದು ಅಲ್ಲೇ ಇದ್ದ
ಶೇಕ್ ಮುಜೀಬ್ ಗೆ ಸಿಡಿಲು ಬಡಿದಿದೆ.
