Wednesday, April 1, 2026
Wednesday, April 1, 2026

Adichunchanari Branch ಆದಿಚುಂಚನಗಿರಿ ಶಾಖಾಮಠದ ಸಮಾಜಮುಖಿ ಕಾರ್ಯಗಳ ಮೂಲಕ ಸುಂದರ ಬದುಕನ್ನ ರೂಪಿಸಿಕೊಳ್ಳಲು ಸಾಧ್ಯವಾಗಿದೆ – ಶ್ರೀಮಾದಾರ ಚೆನ್ನಯ್ಯ ಶ್ರೀ

Date:

Adichunchanari Branch ಸಾಮರಸ್ಯ ಸಹಬಾಳ್ವೆ ಹಾಗೂ ನಮ್ಮ ಹಿತಕರ ಪರಿಸ್ಥಿತಿಯ ಬದುಕು ರೂಪಿತಗೊಳ್ಳಲು ನಮ್ಮ ಧರ್ಮ ಹಾಗೂ ಪರಂಪರೆ ಕಾರಣ ಈ ನಿಟ್ಟಿನಲ್ಲಿ ನಮ್ಮ ಧರ್ಮವನ್ನು ಹಾಗೂ ಎಲ್ಲಾ ಧರ್ಮಗಳನ್ನು ಪ್ರೀತಿಸುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ದೇಶಕ್ಕೆ ಮಾದರಿಯಾದ ಒಂದು ಕೇಂದ್ರವಾಗಿದೆ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಮಠದ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ ತಿಳಿಸಿದರು.
ಶರಾವತಿ ನಗರದ ಶ್ರೀ ಆದಿಚುಂಚನರಿ ಶಾಖಾಮಠದಲ್ಲಿ ನಡೆದ, ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾದ ವಾರ್ಷಿಕೋತ್ಸವ,೨೭ನೇ ವರ್ಷದ ಸರಳ ಸಾಮೂಹಿಕ ವಿವಾಹ ಹಾಗೂ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ದಂಪತಿಗಳು ಹಾಗೂ ನೂತನ ದಂಪತಿಗಳಿಗೆ ಆಶೀರ್ವಚನ ಸಮಾಜ ಮುಖಿಯಾದ ಕಾರ್ಯಕ್ರಮಗಳ ಮೂಲಕ ನಮ್ಮ ದೇಶದಲ್ಲಿ ನಾವು ಸುಂದರ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.
ಶ್ರೀ ಮಠ ನಿಜಕ್ಕೂ ದೇಶದಲ್ಲಿ ಸಮಾನತೆ ಕಟ್ಟುವ ಕೆಲಸ ಮಾಡಿದೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಸರ್ವಧರ್ಮ ಸಮಾನತೆಯನ್ನು ಸಾರಿದಂತವರಾಗಿದ್ದು, ನಂತರದ ಶ್ರೀಗಳು ಇಡಿ ಮಹಾಸಂಸ್ಥಾನವನ್ನು ಇಡೀ ವಿಶ್ವದಲ್ಲೇ ಪವಿತ್ರ ಕ್ಷೇತ್ರವನ್ನಾಗಿ ಮಾಡಿರುವುದು ಹೆಮ್ಮೆಯ ಸಂಗತಿ ಎಂದರು. ಹಸಿವು ಎಂಬುದು ಹೇಳಿದಾಗ ಮಾತ್ರ ಗೊತ್ತಾಗುತ್ತದೆ ಅದನ್ನು ನೋಡಿದಾಗ ತಿಳಿಯಲು ಸಾಧ್ಯವಿಲ್ಲ ಹಾಗೆಯೇ ನಮ್ಮ ಜ್ಞಾನದ ಹಸಿವು, ಧರ್ಮದ ಹಸಿವು ಹಾಗೂ ತತ್ವದ ಹಸುವು ಹೆಚ್ಚಾಗಬೇಕು ಎಂದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ತಮ್ಮ ಆಶೀರ್ವಚನದಲ್ಲಿ ಇಡೀ ವಿಶ್ವದಲ್ಲಿ ನಮ್ಮ ಧರ್ಮ ಹಾಗೂ ಸಂಸ್ಕೃತಿಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಬೇರೆ ದೇಶಗಳನ್ನು ಹೋಲಿಕೆ ಮಾಡಿ ನೋಡಿದಲ್ಲಿ ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರ ಎಲ್ಲರಿಗೂ ಮಾರ್ಗದರ್ಶನ ವಾಗುವ ಮೂಲ ತತ್ವವಾಗಿರುವುದು ಸಂತೋಷದ ವಿಷಯ ಎಂದರು ೨೭ನೇ ವರ್ಷದ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ಸರಳ ಸಾಮೂಹಿಕ ವಿವಾಹ ಹಾಗೂ ಸುವರ್ಣ ವರ್ಷ ಮುಗಿಸಿದ ದಂಪತಿಗಳ ಸನ್ಮಾನ ಸಮಾರಂಭ ನಿಜಕ್ಕೂ ಅತ್ಯಂತ ಶ್ರೇಷ್ಠ ಹಾಗೂ ಹಿರಿಮೆಯ ಕಾರ್ಯಕ್ರಮ ಎಂದು ಹೇಳಿದರು.
ಆಸ್ಟ್ರೇಲಿಯಾ ಪ್ರವಾಸದ ಕುರಿತು ಮಾತನಾಡುತ್ತ ನಮ್ಮ ಸಂಸ್ಕೃತಿಯು ಗತಕಾಲದ ಯುಗಯುಗಗಳ ಐತಿಯ್ಯವನ್ನು ಬೀರುವಂತಹ ಮೂಲತತ್ವವನ್ನು ಒಳಗೊಂಡಿದೆ.ಅದೇ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಲ್ಲಿನ ಜನ ತಮ್ಮ ಇತಿಹಾಸದ ಬಗ್ಗೆ ಹೇಳಿಕೊಳ್ಳಲು ಹಿಂಜರಿರುತ್ತಾರೆ ಏಕೆಂದರೆ ಬ್ರಿಟಿಷರು ಅಂದು ತಪ್ಪು ಮಾಡಿದವರನ್ನು ಗಡಿಪಾರು ಮಾಡುತ್ತಿದ್ದ ಸ್ಥಳ ಇದಂತೆ ಎಂದರು. ನವದಂಪತಿಗಳು ಸುವರ್ಣ ವರ್ಷ ಮುಗಿಸಿದ ಹಿರಿಯ ದಂಪತಿಗಳ ಆಶೀರ್ವಾದ ಪಡೆಯಬೇಕು ಅವರು ಬದುಕನ್ನು ರೂಪಿಸಿಕೊಂಡು, ಕಟ್ಟಿಕೊಂಡ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಬೇಕು ಗೃಹಸ್ಥಾಶ್ರಮ ನಿಮ್ಮ ಜೀವನದಲ್ಲಿ ಉತ್ತಮವಾಗಿ ಬೆಳೆಯಲಿ ಎಂದರು.
ದಸರಿ ಘಟ್ಟ ಶಾಖಾ ಮಠದ ಶ್ರೀ ಚಂದ್ರಶೇಖರ್ನಾಥ ಸ್ವಾಮೀಜಿ, ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಹಾಗೂ ಶ್ರೀ ಕ್ಷೇತ್ರದ ಶಾಖಾ ಮಠದ ಪೂಜ್ಯರು ದಿವ್ಯ ಉಪಸ್ಥಿತಿ ವಹಿಸಿದ್ದರು.
ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ,ಶಾಸಕ ಹಾಗೂ ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಮಾತನಾಡಿ, ಶ್ರೀಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಇಂತಹ ಕಾರ್ಯಕ್ರಮವನ್ನು ಮಾಡುತ್ತಿರುವುದು ಅತ್ಯಂತ ಸ್ವಾಗತಾರ್ಹ ಎಂದರು.50 ರಿಂದ 60 ವರ್ಷಗಳ ಕಾಲ ಸತಿಪತಿಗಳಾಗಿ ಜೀವನ ನಡೆಸುವ ಮೂಲಕ ಇಂದಿನ ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ ಎಂದ ಡಾಕ್ಟರ್ ಸರ್ಜಿ ಇತ್ತೀಚಿನ ವರ್ಷಗಳಲ್ಲಿ ಯುವ ಸಮೂಹ ಪ್ರೀತಿಯಿಂದ ಮದುವೆಯಾಗಿ, ಅಷ್ಟೇ ದ್ವೇಷದಿಂದ ವಿಚ್ಛೇದನವನ್ನು ಪಡೆದುಕೊಳ್ಳುತ್ತಿರುವುದು ಅತ್ಯಂತ ವಿಪರ್ಯಾಸವಾಗಿದೆ. ಹಿರಿಯರ ಜೀವನ ಇಂದಿನ ಯುವಕರಿಗೆ ಮಾರ್ಗದರ್ಶನವಾಗಿದ್ದು,ಇವರುಗಳ ಜೀವನದ ಪುಸ್ತಕವನ್ನು ನಿರ್ಮಿಸುವ ಮೂಲಕ ಯುವ ಸಮೂಹಕ್ಕೆ ನೀಡಬೇಕು ಎಂದು ಸಲಹೆ ನೀಡಿದರು.
Adichunchanari Branch ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ,ಹಿಂದೂ ಸಮಾಜದಲ್ಲಿ ಮಾತ್ರ ಇಂತಹ ಸಂಸ್ಕೃತಿಯನ್ನು ಕಾಣಲು ಸಾಧ್ಯವಾಗಿದೆ. ಅನೇಕ ಕಷ್ಟ ಸುಖಗಳನ್ನ ಸಮನಾಗಿ ಎದುರಿಸಿ ಸುದೀರ್ಘ ವರ್ಷಗಳ ಕಾಲ ಸಂಸಾರ ಮಾಡಿದಂತಹ ದಾಂಪತ್ಯ ಜೀವನವನ್ನು ನಡೆಸಿದಂತಹ ಸತಿಪತಿಗಳಿಗೆ ಸನ್ಮಾನ ಮಾಡುತ್ತಿರುವುದು ಅತ್ಯಂತ ಸಂತೋಷಕರ ಹಾಗೂ ಶ್ಲಾಘನೀಯ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಏನೇ ಕಷ್ಟ ಸುಖ ಬಂದರೂ ನಾವುಗಳು ಒಟ್ಟಾಗಿ ಇರುತ್ತೇವೆ ಎಂಬುದೇ ಈ ಸುದೀರ್ಘ ಜೀವನದ ಗುಟ್ಟಾಗಿದೆ ಸಮಾಜದಲ್ಲಿ ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಿದೆ. ಶ್ರೀ ಆದಿಚುಂಚನಗಿರಿ ಮಠದ ವತಿಯಿಂದ ಹಿರಿಯ ದಂಪತಿಗಳನ್ನ ಸನ್ಮಾನಿಸುತ್ತಿರುವ ಕಾರ್ಯ ಅತ್ಯಂತ ಸ್ವಾಗತ ಎಂದು ಹೇಳಿದರು.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಹಿಂದೂ ಸಮಾಜದಲ್ಲಿ ಸುಧೀರ್ಘ ಜೀವನ ನಡೆಸಿದ ಪತಿ ಪತ್ನಿಯರನ್ನ ಒಂದೆಡೆ ಸೇರಿಸಿ ಸನ್ಮಾನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಹೇಳಿದರು.
ಗಂಡನ ಅಭಿವೃದ್ಧಿ ಹೆಂಡತಿಯ ಪ್ರಾರ್ಥನೆಯಿಂದ ಆಗುತ್ತದೆ.ಪ್ರತಿ ಹಂತದಲ್ಲಿ ಹಾಗೂ ಸಂದರ್ಭದಲ್ಲಿ ಪತ್ನಿ ಯಾದವಳು ತನ್ನ ಗಂಡನ ಶ್ರೇಯಸ್ಸನ್ನ ಬಯಸುತ್ತಾಳೆ, ದೇವರಲ್ಲಿ ಕೂಡ ಇದನ್ನೇ ಪ್ರಾರ್ಥಿಸುತ್ತಾಳೆ, ಆದ್ದರಿಂದ ಗಂಡನ ಅಭಿವೃದ್ಧಿಯಲ್ಲಿ ಹೆಂಡತಿಯ ಪಾತ್ರವಿರುತ್ತದೆ ಎಂದು ಹೇಳಿದರು.
ದುಶ್ಚಟಗಳಿಂದ ಹೊರಬಂದು ಸುಖ ಸಂಸಾರ ನಡೆಸಿದಂತಹ ಅನೇಕ ಘಟನೆಗಳು ನಾವು ನೋಡಬಹುದು ಆದರೆ ಇತ್ತೀಚಿನ ದಿನಗಳಲ್ಲಿ ದೂರದರ್ಶನಗಳಲ್ಲಿ ಎರಡು ಮೂರು ಮದುವೆ ಆಗುವಂತಹ ಮನರಂಜನ ಕಾರ್ಯಕ್ರಮಗಳನ್ನ ಪ್ರಸಾರ ಮಾಡುತ್ತಿರುವುದು ಇತರರಿಗೆ ಪ್ರೇರಣೆಯಾಗುವ ಸಾಧ್ಯತೆ ಇದೆಟಿ ಇಂತಹ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಇದು ಒಳ್ಳೆಯ ಬೆಳವಣಿಗೆಯಲ್ಲ.ಇದರಿಂದ ಯುವ ಸಮೂಹ ದಾರಿ ತಪ್ಪುವ ಸಾಧ್ಯತೆ ಇದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಗೃಹ ಮಂತ್ರಿ, ತೀರ್ಥ ಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ,ರೇಷ್ಮೆ ಮತ್ತು ವಿದ್ಯುತ್ ಕೈಮಗ್ಗ ನಿಗಮದ ಅಧ್ಯಕ್ಷ ಚೇತನ್ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ ಹೆಗಡೆ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಧರ್ಮೇಶ್ ಸಿರಿಬೈಲು, ಕೆ. ಇ. ಕಾಂತೇಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಮಳೆಗೆ ಸಿಕ್ಕ ವಿವಿಧ ಬಡಾವಣೆಗಳಿಗೆ ಶಾಸಕ ಚನ್ನಬಸಪ್ಪ ಭೇಟಿ: ಶಾಶ್ವತ ಪರಿಹಾರಕ್ಕೆ ಸೂಚನೆ

S.N. Channabasappa ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ...

S.N. Channabasappa ಯುವ ಕಂಟೆಂಟ್ ಕ್ರಿಯೇಟರುಗಳು ಶಿವಮೊಗ್ಗದ ಸಾಂಸ್ಕೃತಿಕ ವೈಭವ ಪರಿಚಯಿಸಲಿ- ಶಾಸಕ ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಶಾಂತಿ, ಸುಭದ್ರತೆ ಹಾಗೂ ಸೋಷಿಯಲ್ ಮೀಡಿಯಾ...