Monday, May 25, 2026
Monday, May 25, 2026

Bharat Scouts and Guides ಹೃದಯ ಕ್ರಿಯೆ ನಿಂತಾಕ್ಷಣ ಸಿಪಿಆರ್ ಮಾಡುವ ಕ್ರಮಗಳ ಬಗ್ಗೆ ಎಲ್ಲರಲ್ಲೂ ಅರಿವಿರಲಿ- ಡಾ.ಬಿ.ವಿ.ಚಂಪಾ

Date:

Bharat Scouts and Guides ಹೃದಯ ಮತ್ತು ಉಸಿರಾಟ ನಿಲ್ಲಿಸಿದಾಗ ತಕ್ಷಣ ನೀಡುವ ತುರ್ತು ಚಿಕಿತ್ಸೆ ಕಾರ್ಡಿಯೋಪಲ್ಮನರಿ ರಿಸಸ್ಸಿಟೇಶನ್ ( ಸಿಪಿಆರ್ ) ಆಗಿದೆ. ಇದು ವ್ಯಕ್ತಿಯ ಜೀವ ಉಳಿಸಲು ಸಹಾಯ ಮಾಡುತ್ತದೆ ಎಂದು ಸಿಮ್ಸ್ ಶಿವಮೊಗ್ಗ ಅರಿವಳಿಕೆ ವಿಭಾಗ ಮುಖ್ಯಸ್ಥೆ, ಪ್ರಾಧ್ಯಾಪಕಿ ಡಾ. ಬಿ.ವಿ.ಚಂಪಾ ಹೇಳಿದರು.

ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ವ್ಯಕ್ತಿ ಪ್ರತಿಕ್ರಿಯಿಸದಿದ್ದರೆ, ಉಸಿರಾಟ ಇಲ್ಲದಿದ್ದರೆ, ಹೃದಯ ಬಡಿತ ಕಾಣದಿದ್ದರೆ ಸಿಪಿಆರ್ ಮಾಡಬೇಕು. ಮೊದಲು ವ್ಯಕ್ತಿಯನ್ನು ಸಮತಟ್ಟಾದ ಸ್ಥಳದಲ್ಲಿ ಮಲಗಿಸಬೇಕು. ಎದೆ ಮಧ್ಯದಲ್ಲಿ ಕೈಗಳನ್ನು ಇಟ್ಟು ಒತ್ತಡ ನೀಡಬೇಕು. ನಿಮಿಷಕ್ಕೆ 100–120 ಬಾರಿ ಒತ್ತಡ ಹಾಕಬೇಕು. ಒತ್ತಡದ ಆಳ 5–6 ಸೆಂ.ಮೀ ಇರಬೇಕು. 30 ಚೆಸ್ಟ್ ಕಂಪ್ರೆಸನ್, 2 ಬಾರಿ ರೆಸ್ಕೂö್ಯ ಬ್ರಿಥ್ ಟೇಕ್ ಮಾಡಬೇಕು. ಆಂಬುಲೆನ್ಸ್ ಬರುವವರೆಗೆ ಮುಂದುವರಿಸಬೇಕು. ತಕ್ಷಣ ಸಿಪಿಆರ್ ಪ್ರಾರಂಭಿಸಿದರೆ ಜೀವ ಉಳಿಯುವ ಸಾಧ್ಯತೆ ಹೆಚ್ಚು. ಎಂದು ತಿಳಿಸಿದರು.

ಸಹ ಪ್ರಾಧ್ಯಾಪಕಿ ಡಾ ಯಶೋಧ ವಿ, ಶಿಕಾರಿಪುರ ತಾಲೂಕು ಅರಿವಳಿಕೆ ತಜ್ಞ ಡಾ ವಿನಯ್, ಡಾ ತೇಜಸ್, ಡಾ ಅಭಿಷೇಕ್, ಶುಶ್ರೂಷಾಧಿಕಾರಿ ಗಣೇಶ್ , ಸಿಬ್ಬಂದಿ ವರ್ಗ, ದರ್ಶನ್ ಹಾಗೂ ಸಚಿನ್ ಹಾಜರಿದ್ದರು

Bharat Scouts and Guides ಸಂಯೋಜಕ ರಾಜೇಶ್ ವಿ ಅವಲಕ್ಕಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ ವಂದಿಸಿದರು. ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್ ಕುಮಾರ್, ಸಹಾಯಕ ಜಿಲ್ಲಾ ಆಯುಕ್ತ ಮಲ್ಲಿಕಾರ್ಜುನ ಕಾನೂರ್, ಸಹಾಯಕ ರಾಜ್ಯ ಸಂಘಟನಾ ಆಯುಕ್ತೆ ಸುಮನಾ ಶೇಖರ್, ಹಿರಿಯ ಗೈಡರ್ ಶಾಂತಮ್ಮ, ಹಿರಿಯ ಸ್ಕೌಟರ್ ರುದ್ರಪ್ಪ ಚೀಲೂರ್, ಎನ್. ಡಿ. ಆರ್. ಎಫ್. ತಂಡದ ಮುಖ್ಯಸ್ಥ ವಿವೇಕ್ ಮತ್ತು ಇತರೆ ಸದಸ್ಯರು ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ 162 ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...