Monday, August 24, 2026
Monday, August 24, 2026

S.N. Channabasappa ಬಿಜಿಪಿ ಸ್ಥಾಪನಾ ದಿನ: ಮೋದೀಜಿ ಅವರ “ವಿಕಸಿತ ಭಾರತ” ಸಂಕಲ್ಪದ ಮೂಲಕ ಪಕ್ಷವು ಹೊಸ ಎತ್ತರಕ್ಕೆ ಜಿಗಿದಿದೆ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ರಾಷ್ಟ್ರಪ್ರೇಮದ ಪಯಣಕ್ಕೆ 47 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ, ‘ದೇಶವೇ ಮೊದಲು’ ಎಂಬ ಮಂತ್ರದೊಂದಿಗೆ ಮುನ್ನಡೆಯುತ್ತಿರುವ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಾರ್ಟಿಯ ‘ಸ್ಥಾಪನಾ ದಿನವನ್ನು ಇಂದು ಶಿವಮೊಗ್ಗದ ಜಿಲ್ಲಾ ಕಾರ್ಯಾಲಯದಲ್ಲಿ ಅತ್ಯಂತ ಸಡಗರದಿಂದ ಆಚರಿಸಲಾಯಿತು.

ಸಂಘಟನೆಯ ಉದಾತ್ತ ಪರಂಪರೆ ಸ್ಮರಣೆ:
ಪಕ್ಷದ ಧ್ವಜಾರೋಹಣ ನೆರವೇರಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಘಟನೆಯ ಪರಂಪರೆಯನ್ನು ಸ್ಮರಿಸಿದ ಶಾಸಕರು, “ಅಂತ್ಯೋದಯದ ಆಶಯವನ್ನು ಹೊತ್ತು ಜನಸಂಘದಿಂದ ಜನಾರ್ದನನ ಸೇವೆಯವರೆಗೆ ಪಕ್ಷವು ಬೆಳೆದು ಬಂದಿದೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಹಾಕಿದ ಸಿದ್ಧಾಂತದ ಅಡಿಪಾಯ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸಮರ್ಥ ನೇತೃತ್ವದಲ್ಲಿ ‘ವಿಕಸಿತ ಭಾರತ’ದ ಸಂಕಲ್ಪದೊಂದಿಗೆ ಪಕ್ಷವು ಇಂದು ಹೊಸ ಎತ್ತರಕ್ಕೆ ಜಿಗಿಯುತ್ತಿದೆ,” ಎಂದು ಅಭಿಪ್ರಾಯಪಟ್ಟರು.

ಈ ಸಂಭ್ರಮದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿದ್ದರಾಮಣ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಹಾಗೂ ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯಕ್ ಅವರು ಉಪಸ್ಥಿತರಿದ್ದರು.

S.N. Channabasappa ಕಾರ್ಯಕ್ರಮದಲ್ಲಿ ಜಿಲ್ಲೆ ಹಾಗೂ ನಗರದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ನೂರಾರು ನಿಷ್ಠಾವಂತ ಕಾರ್ಯಕರ್ತರು ಪಾಲ್ಗೊಂಡು ಪಕ್ಷದ ಬಲವರ್ಧನೆಯ ಸಂಕಲ್ಪ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...