S.N. Channabasappa ರಾಷ್ಟ್ರಪ್ರೇಮದ ಪಯಣಕ್ಕೆ 47 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ, ‘ದೇಶವೇ ಮೊದಲು’ ಎಂಬ ಮಂತ್ರದೊಂದಿಗೆ ಮುನ್ನಡೆಯುತ್ತಿರುವ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಾರ್ಟಿಯ ‘ಸ್ಥಾಪನಾ ದಿನವನ್ನು ಇಂದು ಶಿವಮೊಗ್ಗದ ಜಿಲ್ಲಾ ಕಾರ್ಯಾಲಯದಲ್ಲಿ ಅತ್ಯಂತ ಸಡಗರದಿಂದ ಆಚರಿಸಲಾಯಿತು.
ಸಂಘಟನೆಯ ಉದಾತ್ತ ಪರಂಪರೆ ಸ್ಮರಣೆ:
ಪಕ್ಷದ ಧ್ವಜಾರೋಹಣ ನೆರವೇರಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಘಟನೆಯ ಪರಂಪರೆಯನ್ನು ಸ್ಮರಿಸಿದ ಶಾಸಕರು, “ಅಂತ್ಯೋದಯದ ಆಶಯವನ್ನು ಹೊತ್ತು ಜನಸಂಘದಿಂದ ಜನಾರ್ದನನ ಸೇವೆಯವರೆಗೆ ಪಕ್ಷವು ಬೆಳೆದು ಬಂದಿದೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಹಾಕಿದ ಸಿದ್ಧಾಂತದ ಅಡಿಪಾಯ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸಮರ್ಥ ನೇತೃತ್ವದಲ್ಲಿ ‘ವಿಕಸಿತ ಭಾರತ’ದ ಸಂಕಲ್ಪದೊಂದಿಗೆ ಪಕ್ಷವು ಇಂದು ಹೊಸ ಎತ್ತರಕ್ಕೆ ಜಿಗಿಯುತ್ತಿದೆ,” ಎಂದು ಅಭಿಪ್ರಾಯಪಟ್ಟರು.
ಈ ಸಂಭ್ರಮದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿದ್ದರಾಮಣ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಹಾಗೂ ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯಕ್ ಅವರು ಉಪಸ್ಥಿತರಿದ್ದರು.
S.N. Channabasappa ಕಾರ್ಯಕ್ರಮದಲ್ಲಿ ಜಿಲ್ಲೆ ಹಾಗೂ ನಗರದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ನೂರಾರು ನಿಷ್ಠಾವಂತ ಕಾರ್ಯಕರ್ತರು ಪಾಲ್ಗೊಂಡು ಪಕ್ಷದ ಬಲವರ್ಧನೆಯ ಸಂಕಲ್ಪ ಮಾಡಿದರು.
