Rotary Shivamogga ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ, ರೋಟರಿ ರಕ್ತ ಕೇಂದ್ರ ಹಾಗೂ ಆಶಾಜ್ಯೋತಿ ಬ್ಲಡ್ ಸೆಂಟರ್ ಅವರ ಸಂಯುಕ್ತ ಆಶ್ರಯದಲ್ಲಿ, ಶಿವಮೊಗ್ಗ ಡಿ.ಪಿ.ಡಿ.ಎ. ಮಾಜಿ ಅಧ್ಯಕ್ಷರು ಮತ್ತು ಖ್ಯಾತ ರಕ್ತದಾನಿಗಳಾದ ಕೀರ್ತಿಶೇಷ ಎಸ್.ಜಿ. ಯಜ್ಞ ನಾರಾಯಣರವರ ಸ್ಮರಣಾರ್ಥವಾಗಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ವಿಧಾನ ಪರಿಷತ್ತಿ ಸದಸ್ಯ ಡಿ.ಎಸ್.ಅರುಣ್ ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ರಕ್ತದಾನವು ಜೀವ ಉಳಿಸುವ ಮಹತ್ವದ ಸೇವೆಯಾಗಿದ್ದು, ಸಮಾಜದಲ್ಲಿ ಪ್ರತಿಯೊಬ್ಬರೂ ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ಡಿ.ಎಸ್.ಅರುಣ್ ಕರೆ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಸಂಘದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ವೇಳೆ ಸಂಘದ ಮಾಜಿ ಅಧ್ಯಕ್ಷರು ಮಾತನಾಡಿ, ಡಿ.ಹೆಚ್. ಶಂಕರಮೂರ್ತಿ ಅವರು ಸಂಘದ ಸಭಾಭವನ ನಿರ್ಮಾಣಕ್ಕಾಗಿ ನೀಡಿದ ₹5 ಲಕ್ಷ ಅನುದಾನವನ್ನು ಸ್ಮರಿಸಿ, ಅವರ ಸಹಕಾರವನ್ನು ಕೃತಜ್ಞತೆಯಿಂದ ಉಲ್ಲೇಖಿಸಿದರು.
Rotary Shivamogga ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ, ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಎಸ್.ಪಿ. ಮಧುಕರ್, ADC ಸಹಾಯಕ ಔಷಧ ನಿಯಂತ್ರಕರಾದ ಡಾ. ಎಸ್.ವಿ. ವೀರೇಶ್ ಬಾಬು, ಶ್ರೀಮತಿ ವಿ. ವಿಶಾಲಾಕ್ಷಿ, ಔಷಧ ಮಾರಾಟ ಪ್ರತಿನಿಧಿಗಳ ಸಂಘದ ಅಧ್ಯಕ್ಷರಾದ ಅಶೋಕ ಎಸ್.ಜಿ., ಜಿಲ್ಲಾ ಫಾರ್ಮಸಿಸ್ಟ್ ಅಸೋಸಿಯೇಷನ್ ಅಧ್ಯಕ್ಷರಾದ ಗಣೇಶ್ ಎಸ್. ರಾವ್ ಸೇರಿದಂತೆ ಹಲವು ಗಣ್ಯರು ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
