S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ವಸತಿ ನಿಲಯ ಹಾಗೂ ಕೌಶಲ್ಯ ತರಬೇತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಪಾಲ್ಗೊಂಡಿದ್ದರು.
ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಸಚ್ಚಿದಾನಂದೇಶ್ವರ ಭಾರತೀಯ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮವು ಸಮಾಜದ ಮಹಿಳೆಯರ ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದೆ. ಮಹಿಳೆಯರಿಗೆ ಸುರಕ್ಷಿತ ವಸತಿ ಹಾಗೂ ಸ್ವಾವಲಂಬಿ ಬದುಕಿಗೆ ಅಗತ್ಯವಾದ ಕೌಶಲ್ಯ ತರಬೇತಿ ನೀಡುವ ಈ ಸಂಸ್ಥೆಯ ದೂರದೃಷ್ಟಿ ಶ್ಲಾಘನೀಯ ಎಂದು ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು.
S.N.Channabasappa ನಮ್ಮ ನಗರದ ಶ್ರೇಯೋಭಿವೃದ್ಧಿಗೆ ಇಂತಹ ಸೇವಾ ಕೇಂದ್ರಗಳು ಪೂರಕವಾಗಿದ್ದು, ಸಮಾಜದ ಪ್ರತಿಯೊಬ್ಬರಿಗೂ ಇದರ ಪ್ರಯೋಜನ ಸಿಗುವಂತಾಗಲಿ ಎಂದು ಈ ಸಂದರ್ಭದಲ್ಲಿ ಶುಭ ಶಾಸಕರು ಹಾರೈಸಿದರು
