Department of Agriculture 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಅಡಿಯಲ್ಲಿ ಮೆಕ್ಕೆಜೋಳ ಬೆಳೆಗೆ ವಿಮೆ ಮಾಡಿಸಿ, ತಾಂತ್ರಿಕ ಕಾರಣಗಳಿಂದ ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಕೃಷಿ ಇಲಾಖೆ ಅವಕಾಶ ನೀಡಿದೆ.
ಬೆಳೆ ಸಮೀಕ್ಷೆಯ ಫೋಟೋಗಳು ಮತ್ತು ವಿಮೆ ಮಾಡಿಸಿದ ಬೆಳೆಗಳ ನಡುವೆ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕೆಲವು ಅರ್ಜಿಗಳನ್ನು ವಿಮಾ ಸಂಸ್ಥೆಯು ತಿರಸ್ಕರಿಸಿದೆ.
ಇಂತಹ ತಿರಸ್ಕೃತಗೊಂಡ ಅರ್ಜಿಗಳ ಪಟ್ಟಿಯನ್ನು ಆಯಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಯಾವ ರೈತರಿಗೆ ಇನ್ನೂ ವಿಮೆ ಪರಿಹಾರ ಬಂದಿಲ್ಲವೋ, ಅವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪಟ್ಟಿಯನ್ನು ಪರಿಶೀಲಿಸಬೇಕು.
ತಮ್ಮ ಹೆಸರು ತಿರಸ್ಕೃತ ಪಟ್ಟಿಯಲ್ಲಿದ್ದರೆ, 2024ರ ಮುಂಗಾರು ಹಂಗಾಮಿನ ಪಹಣಿ (ಇದರಲ್ಲಿ ವಿಮೆ ಮಾಡಿಸಿದ ಬೆಳೆ ನಮೂದಾಗಿರಬೇಕು), ಬೆಂಬಲ ಬೆಲೆ ಯೋಜನೆಯಲ್ಲಿ ಪ್ರಯೋಜನೆ ಪಡೆದಿರುವ ಬಗ್ಗೆ ರಸೀದಿ, ಪಶು ಆಹಾರ ಘಟಕಕ್ಕೆ ನೀಡಿದ ಬಗ್ಗೆ ಅಥವಾ ಎಪಿಎಂಸಿ ಮಾರುಕಟ್ಟೆಗೆ ಉತ್ಪನ್ನಗಳನ್ನು ಮಾರಾಟ ಮಾಡಿದ ರಸೀದಿಗಳೊಂದಿಗೆ ಲಿಖಿತ ಮನವಿಯನ್ನು ಸಲ್ಲಿಸಬಹುದು.
Department of Agriculture ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನಾಂಕವಾಗಿದೆ. ಸಲ್ಲಿಕೆಯಾದ ಮನವಿಗಳನ್ನು ತಾಲೂಕು ಮಟ್ಟದ ತಹಶೀಲ್ದಾರರ ಅಧ್ಯಕ್ಷತೆಯ ಸಮಿತಿಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಮೊಗ್ಗ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
