Tuesday, April 7, 2026
Tuesday, April 7, 2026

ಮೆಕ್ಕೆಜೋಳ ಬೆಳೆಗೆ ವಿಮೆ ಪರಿಹಾರ ಪಡೆಯದ ರೈತರು ಆಕ್ಷೇಪಣೆ ಸಲ್ಲಿಸಲು ಅವಕಾಶ

Date:

2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಅಡಿಯಲ್ಲಿ ಮೆಕ್ಕೆಜೋಳ ಬೆಳೆಗೆ ವಿಮೆ ಮಾಡಿಸಿ, ತಾಂತ್ರಿಕ ಕಾರಣಗಳಿಂದ ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಕೃಷಿ ಇಲಾಖೆ ಅವಕಾಶ ನೀಡಿದೆ.

ಬೆಳೆ ಸಮೀಕ್ಷೆಯ ಫೋಟೋಗಳು ಮತ್ತು ವಿಮೆ ಮಾಡಿಸಿದ ಬೆಳೆಗಳ ನಡುವೆ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕೆಲವು ಅರ್ಜಿಗಳನ್ನು ವಿಮಾ ಸಂಸ್ಥೆಯು ತಿರಸ್ಕರಿಸಿದೆ.

ಇಂತಹ ತಿರಸ್ಕೃತಗೊಂಡ ಅರ್ಜಿಗಳ ಪಟ್ಟಿಯನ್ನು ಆಯಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಯಾವ ರೈತರಿಗೆ ಇನ್ನೂ ವಿಮೆ ಪರಿಹಾರ ಬಂದಿಲ್ಲವೋ, ಅವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪಟ್ಟಿಯನ್ನು ಪರಿಶೀಲಿಸಬೇಕು.

ತಮ್ಮ ಹೆಸರು ತಿರಸ್ಕೃತ ಪಟ್ಟಿಯಲ್ಲಿದ್ದರೆ, 2024ರ ಮುಂಗಾರು ಹಂಗಾಮಿನ ಪಹಣಿ (ಇದರಲ್ಲಿ ವಿಮೆ ಮಾಡಿಸಿದ ಬೆಳೆ ನಮೂದಾಗಿರಬೇಕು), ಬೆಂಬಲ ಬೆಲೆ ಯೋಜನೆಯಲ್ಲಿ ಪ್ರಯೋಜನೆ ಪಡೆದಿರುವ ಬಗ್ಗೆ ರಸೀದಿ, ಪಶು ಆಹಾರ ಘಟಕಕ್ಕೆ ನೀಡಿದ ಬಗ್ಗೆ ಅಥವಾ ಎಪಿಎಂಸಿ ಮಾರುಕಟ್ಟೆಗೆ ಉತ್ಪನ್ನಗಳನ್ನು ಮಾರಾಟ ಮಾಡಿದ ರಸೀದಿಗಳೊಂದಿಗೆ ಲಿಖಿತ ಮನವಿಯನ್ನು ಸಲ್ಲಿಸಬಹುದು.

ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನಾಂಕವಾಗಿದೆ. ಸಲ್ಲಿಕೆಯಾದ ಮನವಿಗಳನ್ನು ತಾಲೂಕು ಮಟ್ಟದ ತಹಶೀಲ್ದಾರರ ಅಧ್ಯಕ್ಷತೆಯ ಸಮಿತಿಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಮೊಗ್ಗ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...