CM Siddharamaiah ನಮ್ಮ ಸರ್ಕಾರವು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮುತುವರ್ಜಿ ನೀಡುತ್ತಿದ್ದು, ಸ್ವಸ್ಥ ಸಮಾಜ – ಸದೃಢ ಕರ್ನಾಟಕ ಧ್ಯೇಯದಡಿ ಕಾರ್ಯನಿರ್ವಹಿಸುತ್ತಿದೆ.
ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ, ಉಚಿತ ಚಿಕಿತ್ಸೆ, ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ, ಗಂಭೀರ ಕಾಯಿಲೆಗಳಿಗೆ ಅಗ್ಗದ ದರದಲ್ಲಿ ಚಿಕಿತ್ಸೆ, ಹೆಣ್ಣುಮಕ್ಕಳು ವಿಶೇಷವಾಗಿ ತಾಯಂದಿರು ಹಾಗೂ ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡುವ ಮೂಲಕ ಸ್ವಸ್ಥ ಕರ್ನಾಟಕ ನಿರ್ಮಾಣದತ್ತ ದಿಟ್ಟ ಹೆಜ್ಜೆಯಿಟ್ಟಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ವರ್ಗದ, ಎಲ್ಲಾ ಪ್ರದೇಶದ ಜನತೆಗೆ ಆರೋಗ್ಯಯುತ ನೆಮ್ಮದಿಯ ಬದುಕನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಯೋಜನೆಗಳ ವಿವರ ಹೀಗಿದೆ.
ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆ ಮುನಿರಾಬಾದ್ – ಟಿ.ಬಿ. ಡ್ಯಾಂನಲ್ಲಿ ಸ್ಥಾಪನೆ
ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐವಿಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ 1 ಕೋಟಿ ರೂ. ಮೀಸಲು
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ
CM Siddharamaiah ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗೆ ₹620 ಕೋಟಿ ಅನುದಾನ ಮತ್ತು ಉಪಕರಣಗಳ ಖರೀದಿಗಾಗಿ ₹220 ಕೋಟಿ ಮೀಸಲು ಇರಿಸಿದೆ ಎಂದು ತಿಳಿಸಿದ್ದಾರೆ.
