Monday, August 24, 2026
Monday, August 24, 2026

ಜಿಲ್ಲೆಯಾದ್ಯಂತ ಜಾನುವಾರುಗಳಿಗೆ‌ ಕಾಲುಬಾಯಿ ರೋಗ ವಿರುದ್ಧ ಏಪ್ರಿಲ್ 23 ರಿಂದ ಲಸಿಕಾ ಅಭಿಯಾನ- ಪ್ರಭುಲಿಂಗ ಕವಳಿಕಟ್ಟಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಏಪ್ರಿಲ್ 23 ರಿಂದ 9ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 9ನೇ ಸುತ್ತಿನ ಕಾಲು ಮತ್ತು ಜ್ವರ ಲಸಿಕಾ ಕಾರ್ಯಕ್ರಮದ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾನುವಾರುಗಳಲ್ಲಿ ಕಾಲು ಮತ್ತು ಬಾಯಿರೋಗ(ಎಫ್‌ಎಂಡಿ) ತಡೆಗಟ್ಟಲು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಉಚಿತವಾಗಿ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆಗಳನ್ನು ನೀಡಲಾಗುತ್ತದೆ. ಇದೇ ಏಪ್ರಿಲ್ 23 ರಿಂದ ಮೇ 22 ರವರೆಗೆ ಒಟ್ಟು 30 ದಿನಗಳ ಕಾಲ ಜಿಲ್ಲೆಯಾದ್ಯಂತ ಈ ಅಭಿಯಾನ ನಡೆಯಲಿದ್ದು 2030 ರ ವೇಳೆಗೆ ದೇಶದಿಂದ ಕಾಲುಬಾಯಿ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ.
ಜಿಲ್ಲೆಯ ಅಂಕಿ-ಅAಶ : ಜಿಲ್ಲೆಯಲ್ಲಿ 3,86,030 ಹಸುಗಳು ಹಾಗೂ 80,622 ಎಮ್ಮೆಗಳು ಸೇರಿ ಒಟ್ಟು 4,66,652 ಜಾನುವಾರುಗಳಿದ್ದು ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಜಿಲ್ಲೆಯಾದ್ಯಂತ ಒಟ್ಟು 477 ಲಸಿಕೆದಾರರನ್ನು ನೇಮಕ ಮಾಡಲಾಗಿದೆ.
ಜಿಲ್ಲೆಯಲ್ಲಿ 532715 ಡೋಸ್ ಲಸಿಕೆ ದಾಸ್ತಾನು ಮಾಡಲಾಗಿದ್ದು, ಲಸಿಕಾ ಕಾರ್ಯಕ್ರಮವು ಪ್ರತಿದಿನ ಬೆಳಿಗ್ಗೆ 7 ರಿಂದ 11 ಗಂಟೆಯವರೆಗೆ ನಡೆಯಲಿದೆ. ಲಸಿಕೆ ಹಾಕುವ ಸಮಯದಲ್ಲಿ ರೈತರ ಆಧಾರ್ ಸಂಖ್ಯೆ ಹಾಗೂ ಜಾನುವಾರುಗಳ ಕಿವಿ ಓಲೆ(ಟ್ಯಾಗ್ ನಂಬರ್) ವಿವರಗಳನ್ನು ಕಡ್ಡಾಯವಾಗಿ ಪಡೆಯಲಾಗುವುದು ಎಂದ ಅವರು ಇದನ್ನು ‘ಭಾರತ್ ಪಶುಧನ್’ ತಂತ್ರಾAಶದಲ್ಲಿ ಅಪ್‌ಲೋಡ್ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಲಸಿಕೆ ಹಾಕಿದ ನಂತರ ಯಾವುದೇ ವ್ಯತಿರಿಕ್ತ ಪರಿಣಾಮಗಳು ಕಂಡುಬAದಲ್ಲಿ ತಕ್ಷಣದ ಚಿಕಿತ್ಸೆಗಾಗಿ ತುರ್ತು ಔಷಧಿಗಳನ್ನು ಸಿದ್ಧಪಡಿಸಿಕೊಳ್ಳಲು ಸೂಚಿಸಿದ ಅವರು ಗ್ರಾ.ಪಂ ಗಳ ಹಳ್ಳಿಗಳಲ್ಲಿ ವಾರ್ಡ್ಗಳಲ್ಲಿ, ಲಸಿಕೆ ನೀಡುವ ಬಗ್ಗೆ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದರು.
ಮನೆ ಬಾಗಿಲಿಗೆ ಲಸಿಕೆ : ಪಶುಪಾಲನಾ ಇಲಾಖೆಯ ಸಿಬ್ಬಂದಿಗಳು ರೈತರ ಮನೆಬಾಗಿಲಿಗೆ ಬಂದು ಉಚಿತವಾಗಿ ಲಸಿಕೆ ಹಾಕಲಿದ್ದು, ಜಿಲ್ಲೆಯ ಎಲ್ಲಾ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಬಾಬುರತ್ನ, ಡಿಯುಡಿಸಿ ಯೋಜನಾ ನಿರ್ದೇಶಕ ರಂಗಸ್ವಾಮಿ, ಇತರೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...