Friday, April 10, 2026
Friday, April 10, 2026

Shivamogga News ಕಾ.ಎಂ.ಲಿಂಗಪ್ಪನವರು, ಅಸಹಾಯಕರು ಮತ್ತು ದುರ್ಬಲ ಜನತೆಯ ಪರ ಧ್ವನಿಯಾಗಿದ್ದರು- ಡಿ.ರವಿಕುಮಾರ್.

Date:

Shivamogga News ನಾಡು ಕಂಡಂತಹ ಹಿರಿಯ ದಣಿವರಿಯದ ಅಕ್ಷರದ ದನಿ ಕಾಮ್ರೇಡ್ ಎಂ ಲಿಂಗಪ್ಪರವರು ಸಾಮಾಜಿಕ ಕಳಕಳಿ, ಸಾಮಾಜಿಕ ನ್ಯಾಯ, ಅಸಹಾಯಕರ, ದುರ್ಬಲ ಜನತೆಯ ಪರವಾಗಿ ಪ್ರತಿಧ್ವನಿಸಿದ್ದ ವಿಶೇಷ ವ್ಯಕ್ತಿತ್ವದ ರಾಜಿರಹಿತ ಪತ್ರಕರ್ತರಾಗಿದ್ದರು’ ಎಂದು ತಿಳಿದುಕೊಂಡಿದ್ದೆ, ಅವರನ್ನು ನಗರದ ವಿವಿದೆಡೆ ದರ್ಶಿಸಿಯು ಇದ್ದೆ, ಅವರ ಕೆಂಪು ಪೋಷಾಕು, ಟೋಪಿ, ಹೆಗಲಿಗೆ ಮೈಕ್ ಹಾಕಿಕೊಂಡು, ಕೈಯಲ್ಲಿ ಪತ್ರಿಕೆ ಇಟ್ಟುಕೊಂಡು ಸಾರ್ವಜನಿಕರ ಗಮನ ಸೆಳೆದಿದ್ದರು, ಈ ಮೂಲಕ ಆಡಳಿತ ವ್ಯವಸ್ಥೆಯನ್ನು ಎಚ್ಚರಿಸುತ್ತಿದ್ದು ಇಂದಿಗೂ ಯಾರು ಮಾಡಲಾಗದ ಹೋರಾಟದ ಗಣಿಯಾಗಿದ್ದರು ಎಂದು ಶಿಕಾರಿಪುರದ “ಅಕ್ಷರ ಎಜುಕೇಷನ್ ಟ್ರಸ್ಟ್ ” ಸಂಸ್ಥಾಪಕರಾದ ಡಿ ರವಿಕುಮಾರ್ ಅಭಿಪ್ರಾಯಪಟ್ಟರು,
ಅವರು ಶಿವಮೊಗ್ಗ ನಗರದ ಆರ್’ಟಿಓ ಕಚೇರಿ ರಸ್ತೆಯಲ್ಲಿರುವ ಶ್ರೀ ಕಲಾ ಕೌಶಲ್ಯ ಅಭಿವೃದ್ದಿ ಕೇಂದ್ರ ಆವರಣದಲ್ಲಿ ಏಪ್ರಿಲ್ 09 ರ ಸಂಜೆ ‘ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ’ ಸಂಘಟನೆವತಿಯಿಂದ ಆಯೋಜಿಸಿದ್ದ ದಿವಂಗತರಾದ ಹಿರಿಯ ಪತ್ರಕರ್ತ ‘ಕಾಮ್ರೇಡ್ ಎಂ ಲಿಂಗಪ್ಪ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಬರಪೂರತೆಯಿಂದ ಮಾತನಾಡಿದರು.

ಹಿಂದುಳಿದ ಜನಜಾಗೃತಿ ಸಮಿತಿ ಸಂಚಾಲಕರಾದ ಆರ್ ಟಿ ನಟರಾಜ್ ಅವರು ಮಾತನಾಡಿ, ‘ಕಾಮ್ರೇಡ್ ಎಂ ಲಿಂಗಪ್ಪರೊಂದಿಗೆ ತಮಗೆ ಹಲವು ದಶಕಗಳ ಒಡನಾಟವಿತ್ತು. ಯಾವುದೇ ಮರ್ಜಿ – ಮುಲಾಜಿಗೂ ಒಳಗಾಗುತ್ತಿರಲಿಲ್ಲ. ನೊಂದವರಿಗೆ ನ್ಯಾಯ ಕೊಡಿಸುತ್ತಿದ್ದರು. ಹೋರಾಟದ ದೊಡ್ಡ ಧ್ವನಿಯಾಗಿದ್ದರು’ ಎಂದು ತಿಳಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಕಾರ್ಪೋರೇಟರ್ ಐಡಿಯಲ್ ಗೋಪಿ, ( ಜಿ ಗೋಪಾಲಕೃಷ್ಣ ) ಅವರು ಮಾತನಾಡಿ, ‘ತಾವೊಬ್ಬ ರಾಜಕಾರಣಿಯಾಗಲು ಕಾಮ್ರೇಡ್ ಅವರು ಕಾರಣಕರ್ತರಾಗಿದ್ದಾರೆ. ಅವರ ಹೋರಾಟದ ಸ್ಪೂರ್ತಿಯೇ ಪಾಲಿಕೆಯ ಜವಾಬ್ದಾರಿಯನ್ನು ನಿರ್ವಹಿಸಲು ಸಾಧ್ಯವಾಗಿದೆ, ದುರ್ಗಿಗುಡಿ ರಸ್ತೆಯ ತಮ್ಮ ಮನೆಯ ಬಳಿಯೇ ಅವರ ಮನೆಯಿತ್ತು. ಬಾಲ್ಯದಿಂದಲೇ ತಮ್ಮಲ್ಲಿ ನಾಯಕತ್ವ ಗುಣ ಬೆಳೆಸಿದ್ದರು. ಅವರು ಚುನಾವಣೆಗೆ ನಿಂತಾಗ ತಾವು ಅವರೊಂದಿಗೆ ಪ್ರಚಾರಕ್ಕೆ ತೆರಳುತ್ತಿದ್ದೆ. ಅವರಂತಹ ಕೆಚ್ಚೆದೆಯ ಹೋರಾಟಗಾರರನ್ನು ತಾವು ನೋಡಿಲ್ಲ’ ಎಂದು ಅವರ ವ್ಯಕ್ತಿತ್ವದ ಗುಣಗಾನ ಮಾಡಿದರು.
ವಕೀಲರಾದ ಗೀತಾ ಮಾನೆ ಅವರು ಮಾತನಾಡಿ, ‘ಕಾಮ್ರೇಡ್ ಅವರ ಹೆಸರಿನಲ್ಲಿ ಸಮಾಜದ ವಿವಿಧ ವರ್ಗಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ನಿಜಕ್ಕೂ ಅಭಿನಂದನೀಯ, ಮಾದರಿಯಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹೊತ್ತಿನ ತಲೆಮಾರಿನ ಯುವ ಸಮುದಾಯಕ್ಕೆ ಮಾದರಿ ಎಂದು ತಿಳಿಸಿದರು,
ಇದಕ್ಕೂ ಮುನ್ನ ಸಂಘಟನೆಯ ಅಧ್ಯಕ್ಷ ಗಾರಾ ಶ್ರೀನಿವಾಸ್ ಅವರು ಮಾತನಾಡಿದರು. ‘ಕಾಮ್ರೇಡ್ ದೈಹಿಕವಾಗಿ ದೂರವಾಗಿರಬಹುದು. ಆದರೆ ಅವರ ಹೋರಾಟದ ಜೀವನ ಅವಿಸ್ಮರಣೀಯ. ಅವರ ನೆನಪು ಸದಾ ಕಾಲವಿರಬೇಕೆಂಬ ಉದ್ದೇಶದಿಂದ ಅವರ ಹೆಸರಿನಲ್ಲಿ ಪ್ರತಿ ವರ್ಷ ಸಮಾಜದ ವಿವಿಧ ವರ್ಗಗಳ ಸಾಧಕರನ್ನು ಗುರುತಿಸಿ ಸಂಘಟನೆಯಿಂದ ಗೌರವಿಸಲಾಗುವುದು’ ಎಂದು ತಿಳಿಸಿದರು.

Shivamogga News ಜೆಎನ್’ಎನ್’ಸಿಇ ಉಪನ್ಯಾಸಕ ಸುರೇಶ್ ಹೆಚ್ ಬಿ ಅವರು ಕಾಮ್ರೇಡ್ ಒಡನಾಟದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ವೇದಿಕೆಯಲ್ಲಿ ಸಂಘದ ನಿರ್ದೇಶಕರಾದ ದಯಾನಂದ್, ಕಾಮ್ರೇಡ್ ಅವರ ಮೊಮ್ಮಗ ಅಶೋಕ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಪರಮೇಶ್, ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ, ನಿರ್ದೇಶಕರಾದ ಚಿರಂಜೀವಿ ಬಾಬು, ಶೃತಿ ಶೇಟ್, ಅನಿಲ್ ಕುಮಾರ್, ಎಂ ಎನ್ ಸಿಗ್ಬತ್ ಉಲ್ಲಾ, ಕರವೇ ಕಿರಣ್ ಕುಮಾರ್, ಪತ್ರಿಕಾ ವಿತರಕ ಸಂಘದ ಮುಖಂಡ ಮಾಲತೇಶ್ ಸೇರಿದಂತೆ ಮೊದಲಾದವರಿದ್ದರು.

ಸಿನಿಮಾ ನಟ, ಪತ್ರಕರ್ತ, ಬರಹಗಾರ, ವಕೀಲರಿಗೆ ಪ್ರಶಸ್ತಿ ಪ್ರದಾನ
ಸಿನಿಮಾ ನಟ ರಘುರಾಜ್ ಮಲ್ನಾಡ್, ಪತ್ರಕರ್ತ ಬಿ ರೇಣುಕೇಶ್, ಸಾಹಿತಿ ಖಲಂದರ್ ರಜ್ಜಿ ಬೆಜ್ಜವಳ್ಳಿ, ಯುವ ವಕೀಲರಾದ ರೇಖೇಶ್ ಮಾನೆ ಅವರಿಗೆ ‘ಕಾಮ್ರೇಡ್ ಎಂ ಲಿಂಗಪ್ಪ’ ಪ್ರಶಸ್ತಿ ನೀಡಿ ಆತ್ಮೀಯವಾಗಿ ಅಭಿನಂದಿಸಲಾಯಿತು. ಪ್ರಶಸ್ತಿ ಪುರಸ್ಕೃತರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಪತ್ರಕರ್ತ ಬಿ ರೇಣುಕೇಶ್ ಅವರು ಮಾತನಾಡಿ, ‘ಕಾಮ್ರೇಡ್ ಅವರು ತಮ್ಮ ಪತ್ರಿಕೋದ್ಯಮದ ಗುರುಗಳಾಗಿದ್ದಾರೆ. ಶೋಷಿತರು, ಬಡವರು, ನೊಂದವರ ಧ್ವನಿಯಾಗಿದ್ದರು. ತಾವು ನಂಬಿದ ತತ್ವ – ಸಿದ್ದಾಂತಗಳಿಗೆ ಬದ್ದರಾಗಿ ಜೀವನ ನಡೆಸಿದ ಅಪರೂಪದ ಪತ್ರಕರ್ತರಾಗಿದ್ದರು’ ಎಂದು ಅವರೊಂದಿಗಿನ ಒಡನಾಟ ಮೆಲುಕು ಹಾಕಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Krishnashastry ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

ಲೇ: ಪ್ರಸಾದ್ ಶ್ರೀವತ್ಸ.ದಾವಣಗೆರೆ. Krishnashastry ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...