B.Y. Raghavendra ಶಿವಮೊಗ್ಗ ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ರಸ್ತೆಗಳ ಅಭಿವೃದ್ಧಿ ಕುರಿತಂತೆ ಇಂದು ಪ್ರವಾಸಿ ಮಂದಿರದಲ್ಲಿ ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಶಾಸಕರಾದ ಎಸ್.ಎನ್, ಚೆನ್ನಬಸಪ್ಪನವರು ಪಾಲ್ಗೊಂಡರು.
B.Y. Raghavendra ಈ ಸಂದರ್ಭದಲ್ಲಿ ಸುಬ್ಬಯ್ಯ ಕಾಲೇಜಿನಿಂದ ಎಂ.ಆರ್.ಎಸ್ (NH-13) ಹಾಗೂ ಹರಿಗೆಯಿಂದ ಶ್ರೀರಾಂಪುರದವರೆಗಿನ (NH-206) ರಸ್ತೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಹಾಗೂ ಪಾದಚಾರಿಗಳ ಸುರಕ್ಷತೆಗಾಗಿ ನಗರದ ಪ್ರಮುಖ 5 ಕೇಂದ್ರಗಳಲ್ಲಿ (ಎಂ.ಆರ್.ಎಸ್, ಸಂದೇಶ್ ಮೋಟಾರ್ಸ್, ಬಸ್ ನಿಲ್ದಾಣ, ಪ್ರವಾಸಿ ಮಂದಿರ ವೃತ್ತ ಹಾಗೂ ಗಾಡಿಕೊಪ್ಪ) ಜಪಾನ್ ಮಾದರಿಯ Foot Overbridges ನಿರ್ಮಿಸಲು ತಾಂತ್ರಿಕ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
