Thursday, April 16, 2026
Thursday, April 16, 2026

ಬಾಳೆಬರೆ ಘಾಟ್ :ಬಸ್ಸುಗಳ ಪ್ರಯಾಣಿಕರನ್ನ ಇಳಿಸಿ ಬೇರೆ ಬಸ್ಸಿಗೆ ಹತ್ತಿಸುವ ಪ್ರಕ್ರಿಯೆ ಬಗ್ಗೆಸರ್ಕಾರದ ಮಾರ್ಗಸೂಚಿ

Date:

ಬಾಳೆಬರೆ ಘಾಟ್‌ನಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.

ಪ್ರಸ್ತುತ ಸಾರ್ವಜನಿಕರ ಹಿತದೃಷ್ಟಿಯಿಂದ, ಘಾಟಿಯ ಎರಡು ಬದಿಗಳಿಂದ ಬರುವ ಬಸ್ಸುಗಳ ಪ್ರಯಾಣಿಕರನ್ನು ಪರಸ್ಪರ ಬದಲಾಯಿಸುವ (ಅದಲು-ಬದಲು) ಮೂಲಕ ಪ್ರಯಾಣ ಮುಂದುವರಿಸಲು ಕೆಲವು ಷರತ್ತುಗಳಿಗೆ ಒಳಪಟ್ಟು ತಾತ್ಕಾಲಿಕ ಅನುಮತಿ ನೀಡಿ ಆದೇಶಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ.

ಸಂಚಾರ ನಿಯಮಗಳು ಮತ್ತು ಷರತ್ತುಗಳು :

  • ಈ ವ್ಯವಸ್ಥೆಯು ಕೇವಲ ಸಾರ್ವಜನಿಕ ಸಂಪರ್ಕ (ಸ್ಟೇಜ್ ಕ್ಯಾರೇಜ್) ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ. ಕೇವಲ 35 ಆಸನವುಳ್ಳ (432 ಸೆಂ.ಮೀ ಚಕ್ರತಳ ಮೀರದ) ಬಸ್ಸುಗಳಿಗೆ ಮಾತ್ರ ತಿರುಗಲು ಅವಕಾಶವಿರುತ್ತದೆ.
  • ವಾಹನ ಬದಲಾವಣೆ ಮಾಡಲು ಪ್ರಯಾಣಿಕರು ಸುಮಾರು 85 ಮೆಟ್ಟಿಲುಗಳನ್ನು ಕಾಲ್ನಡಿಗೆಯಲ್ಲಿ ದಾಟಬೇಕಾಗುತ್ತದೆ. ಈ ಮೆಟ್ಟಿಲುಗಳು ಕಿರಿದಾಗಿರುವುದರಿಂದ ಕೇವಲ ದೈಹಿಕವಾಗಿ ಸದೃಢರಾಗಿರುವವರಿಗೆ ಮಾತ್ರ ಅವಕಾಶ ನೀಡಲಾಗುವುದು.
  • ಭೂಕುಸಿತ ಸಂಭವಿಸಿದ ಜಾಗಕ್ಕೆ ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಳೆಗಾಲ ಹತ್ತಿರವಿರುವುದರಿಂದ ಮೆಟ್ಟಿಲುಗಳಿಗೆ ಹ್ಯಾಂಡ್ ರೈಲ್‌ಗಳನ್ನು ಅಳವಡಿಸಲು ಮತ್ತು ದುರಸ್ತಿ ಮಾಡಲು ಸೂಚಿಸಲಾಗಿದೆ.
  • ಸ್ಥಳದಲ್ಲಿ ತುರ್ತು ಉಪಚಾರಕ್ಕಾಗಿ ಸೂಕ್ತ ವೈದ್ಯಕೀಯ ವ್ಯವಸ್ಥೆಯನ್ನು ಕಲ್ಪಿಸಲು ಜಿಲ್ಲಾಡಳಿತ ನಿರ್ದೇಶಿಸಿದೆ.

ಮಾರ್ಗ ಬದಲಾವಣೆ ವಿವರ

  • ಶಿವಮೊಗ್ಗ-ಹೊಸನಗರ-ನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರಕ್ಕೆ ತೆರಳುವ ವಾಹನಗಳು ಚಂಡಿಕಾ ದೇವಸ್ಥಾನದವರೆಗೆ ಸಂಚರಿಸಬಹುದಾಗಿದ್ದು, ಅಲ್ಲಿ ಸೂಕ್ಷ್ಮತೆ ಮತ್ತು ಜಾಗರೂಕತೆಯಿಂದ ತಿರುಗಿಸಲು ಅವಕಾಶವಿರುತ್ತದೆ.
  • ಚಂಡಿಕ ದೇವಸ್ಥಾನದ ಒಂದನೇ ತಿರುವಿನಲ್ಲಿ ಭೂ ಕುಸಿತವಾದ ಜಾಗದ ಕೆಳಗಿನ ಮೊದಲನೇ ತಿರುವಿನಲ್ಲಿ ಹಾಲಿ ಇರುವ ಕಾಂಕ್ರಿಟ್ ರಸ್ತೆಯ ಕ್ಯಾರೇಜ್-ವೇ-24 ಅಡಿ ಇದ್ದು ಅದಕ್ಕೆ ಹೊಂದಿಕೊಂಡಿರುವ ರಸ್ತೆಯ ಗ್ರಾವೆಲ್ ಶೋಲ್ಡರ್‌ನ್ನು ಸ್ಥಳೀಯ ಸಾರ್ವಜನಿಕರೇ ಕಾಂಕ್ರಿಟ್ ರಸ್ತೆಗೆ ಸಮನಾಗಿ 18 ಅಡಿ ಅಗಲಕ್ಕೆ ಅಗಲೀಕರಣ ಮಾಡಿ ಎತ್ತರಿಸಿ ಮಟ್ಟ ಮಾಡಿರುವುದು ಕಂಡುಬಂದಿದ್ದು, ವಾಹನಗಳನ್ನು ಸೂಕ್ಷ್ಮತೆ ಮತ್ತು ಜಾಗರೂಕತೆಯಿಂದ ತಿರುಗಿಸಲು ಅವಕಾಶವಿರುತ್ತದೆ.
  • ಪ್ರಯಾಣಿಕರು ವಾಹನ ಬದಲಾವಣೆ ಮಾಡಲು ಕಾಲ್ನಡಿಗೆಯಲ್ಲಿ ಓಡಾಡಲು ಪ್ರಸ್ತಾಪಿಸಿರುವ ಮಟ್ಟಿಲುಗಳು ಕಿರಿದಾಗಿದ್ದು ಮೆಟ್ಟಿಲುಗಳನ್ನು ಹತ್ತುವ ಸಮಯದಲ್ಲಿ ಗೊಂದಲವಿಲ್ಲದೇ ದೈಹಿಕವಾಗಿ ಸದೃಢವಾಗಿರುವ ಪ್ರಯಾಣಿಕರಿಗೆ ಮಾತ್ರ ಓಡಾಡಲು ಅವಕಾಶ ಕಲ್ಪಿಸಬಹುದಾಗಿರುತ್ತದೆ. ಈ ಆದೇಶವು ಏಪ್ರಿಲ್ 14 ರಿಂದ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Sports and Cultural Club ಬಾಕ್ಸ್ ಕ್ರಿಕೆಟ್ ಟೂರ್ನಿ: ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಚಾಂಪಿಯನ್ಸ್

JCI Sports and Cultural Club ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್...

B.Y. Raghavendra ಭಾರತದಲ್ಲಿ ಮಹಿಳಾ ಮೀಸಲಾತಿಯನ್ನ ಐತಿಹಾಸಿಕವಾಗಿ ಜಾರಿಗೆ ತರಲಾಗುತ್ತಿದೆ- ಬಿ.ವೈ.ರಾಘವೇಂದ್ರ

B.Y. Raghavendra ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಬುತ್ವವಾದ ಭಾರತದಲ್ಲಿ ಐತಿಹಾಸಿಕ ಮಹಿಳಾ...

B.Y. Raghavendra ಶಿವಮೊಗ್ಗದ ಸಂಚಾರ ವ್ಯವಸ್ಥೆ ಸುಧಾರಣೆ ಮಾಸ್ಟರ್ ಪ್ಲಾನ್: ಪ್ರಗತಿ ಪರಿಶೀಲನ ಸಭೆ

B.Y. Raghavendra ಶಿವಮೊಗ್ಗ ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ರಸ್ತೆಗಳ...